ಮೈಸೂರು: ದಸರಾ ಅಂದ್ರೇ ದುಷ್ಟ ಶಕ್ತಿಗಳ ಸಂಹಾರ, ಶಿಷ್ಟ ಜನರ ರಕ್ಷಣೆ ಅದೇ ದಸರಾ.., ಜಾಹಿರಾತನ್ನು ಇವತ್ತಿಗೆ ನೀವು ಹೇಗೆ ವ್ಯಾಖ್ಯಾನ ಮಾಡ್ತೀರೋ ಹಾಗೆ ಎಂದು ಮೈಸೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಮೈಸೂರು ದಸರಾ ಹಿನ್ನೆಲೆಯಲ್ಲಿ ಇಂದು ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪತ್ರಿಕೆಗಳಲ್ಲಿ ಸರ್ಕಾರದಿಂದ ಜಾಹಿರಾತು ಕೊಟ್ಟಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ದಸರಾ ಅಂದ್ರೇ ದುಷ್ಟ ಶಕ್ತಿಗಳ ಸಂಹಾರ, ಶಿಷ್ಟ ಜನರ ರಕ್ಷಣೆ ಅದೇ ದಸರಾ. ವಿಜಯನಗರದ ಅರಸರು ಜಯದ ಸಂಕೇತವಾಗಿ ಮಾಡಿದ್ರು .
ಮೈಸೂರು ಅರಸರು ಅದನ್ನು ಮುಂದುವರೆಸಿದರು. ಇವತ್ತು ಅದೇ ಸಂಪ್ರದಾಯ ಮುಂದುವರೆದಿದೆ. ಜಾಹಿರಾತನ್ನು ಇವತ್ತಿಗೆ ನೀವು ಹೇಗೆ ವ್ಯಾಖ್ಯಾನ ಮಾಡ್ತೀರೋ ಹಾಗೆ. ಒಂದೊಮ್ಮೆ ನೀವುಗಳು ಕೂಡ ಪರವಾಗಿ, ವಿರೋಧವಾಗಿ ವ್ಯಾಖ್ಯಾನ ಮಾಡ್ತೀರಿ. ಜಾಹಿರಾತಿನ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ವಿಚಾರ. ಯಡಿಯೂರಪ್ಪ ಪೋಕ್ಸೋ ಕೇಸ್ ನಲ್ಲಿ ಸಿಕ್ಕಿಬಿದ್ದಿದ್ದಾರೆ. ಮೊದಲು ಅವರನ್ನು ಪಾರ್ಲಿಮೆಂಟ್ ಬೋರ್ಡ್ ನಿಂದ ಕಿತ್ತು ಹಾಕಲು ಹೇಳಿ. ಕೋರ್ಟ್ ಇಲ್ಲದಿದ್ದರೇ ಅವರು ಜೈಲಿನಲ್ಲಿ ಇರಬೇಕಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಾಂಗ್ ಕೊಟ್ಟಿದ್ದಾರೆ
ನನ್ನ ಮೇಲೆ ಚಾಮುಂಡೇಶ್ವರಿ ಅಶೀರ್ವಾದ ಸದಾ ಇರುತ್ತದೆ. ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ಇದರಿಂದ ಇಷ್ಟೊಂದು ಬಾರಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲು ಅವಕಾಶ ಸಿಕ್ಕಿದೆ.
ಚಾಮುಂಡೇಶ್ವರಿ ಆಶೀರ್ವಾದ ಸದಾ ಇರುತ್ತೇ. ದೇವರ ಆಶೀರ್ವಾದ ಇಲ್ಲ ಎನ್ನುವುದಿಲ್ಲ. ದೇವರ ಆಶೀರ್ವಾದ ಇರುವುದರಿಂದಲೇ ಇಷ್ಟು ವರ್ಷ ರಾಜಕೀಯದಲ್ಲಿ ಉಳಿದಿರುವುದು. ಹೊಗಳುವವರು ಇರುತ್ತಾರೆ.
ತೆಗಳುವವರು ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಇಬ್ಬರು ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ ಆಗಬೇಕು ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.