ಪ್ರತಿನಿಧಿ ವರದಿ ಚಾಮರಾಜನಗರ
ಮೈಸೂರಿನ ಮಹಾರಾಜ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಚಾಮರಾಜನಗರ ನಾಗಮಾರ್ಷಲ್ ಆರ್ಟ್ಸ್ ಅಕಾಡೆಮಿ ಕರಾಟೆಪಟುಗಳು ವಿಜೇತರಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಕಟ ಮತ್ತು ಕುಮಿತೆ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ ಸಮಗ್ರ ಪ್ರಶಸ್ತಿ, ಪ್ರಮಾಣಪತ್ರ ಪಡೆದಿದ್ದಾರೆ. ವಿಜೇತ ಕರಾಟೆ ಪಟುಗಳನ್ನು ಮುಖ್ಯ ಕರಾಟೆ ತರಬೇತುದಾರರು ಹಾಗೂ ವಕೀಲ ಸೆನ್ಸಾಯ್ ರಾಜೇಂದ್ರ, ತರಬೇತುದಾರರಾದ ಸೆನ್ಸಾಯ್ ಯೋಗೀಶ್ ಅಭಿನಂದಿಸಿದರು.