ಮೈಸೂರು: ಮುಡಾದಲ್ಲಿನ ಮಹತ್ವದ ದಾಖಲೆಗಳನ್ನು ಸಚಿವ ಭೈರತಿ ಸುರೇಶ್ ತೆಗೆದುಕೊಂಡು ಹೋಗಿದ್ದಾರೆ. ಹೀಗಾಗಿ ಇಡಿ ಅಧಿಕಾರಿಗಳು ಸಚಿವ ಭೈರತಿ ಸುರೇಶ್ ಮನೆ, ಕಚೇರಿಯ ಮೇಲೂ ದಾಳಿ ಮಾಡಬೇಕು ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಮೈಸೂರಿನಲ್ಲಿಂದು ಒತ್ತಾಯ ಮಾಡಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತಾನಾಡಿದ ಅವರು, ಇಡಿ ದಾಳಿ ತೃಪ್ತಿ , ಸಮಾಧಾನ ತಂದಿದೆ. ಸಚಿವ ಭೈರತಿ ಸುರೇಶ್, ಈ ಹಿಂದಿನ ಮುಡಾ ಆಯುಕ್ತ ದಿನೇಶ್ ಸಾಕಷ್ಟು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಇಡಿ ದಾಳಿಯಿಂದ ಯಾವೆಲ್ಲಾ ದಾಖಲೆಗಳು ಮಿಸ್ ಆಗಿವೆ ಎಂಬುದು ಇಡಿ ತನಿಖೆಯಿಂದ ಗೊತ್ತಾಗಲಿದೆ. ಸಿಎಂ ಕಚೇರಿ, ಭೈರತಿ ಸುರೇಶ್ ಕಚೇರಿಯಲ್ಲಿ ಹುಡುಕಾಡಿದರೆ ದಾಖಲೆಗಳು ಸಿಗಲಿವೆ. ಕೂಡಲೇ ಇಡಿ ಅಧಿಕಾರಿಗಳು ಸಿಎಂ, ಸಚಿವರ ಕಚೇರಿಗಳ ಮೇಲೂ ದಾಳಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
3 ಕ್ಷೇತ್ರದಲ್ಲಿಯೂ ಮೈತ್ರಿ ಅಭ್ಯರ್ಥಿಯೇ ನಿಲ್ಲುತ್ತಾರೆ, ಗೆಲ್ಲುತ್ತಾರೆ
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ವಕ್ತಾರ ಎಂ ಜಿ ಮಹೇಶ್, ವಾಲ್ಮೀಕಿ ನಿಗಮದ ಹಣವನ್ನು ಲೋಕಸಭಾ ಚುನಾವಣೆ ವೇಳೆ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟಿದ್ದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ. ಹಾಗಾಗಿ ಕಾಂಗ್ರೆಸ್ ಸಂಸದರಾದ ತುಕಾರಾಂ ಹಾಗು ಕುಮಾರ್ ನಾಯಕ್ ಅವರನ್ನು ಅನರ್ಹಗೊಳಿಸಬೇಕು.ಈ ಬಗ್ಗೆ ಅಕ್ಟೊಬರ್ 22ರಂದು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ವತಿಯಿಂದ ಲಿಖಿತ ದೂರು ನೀಡುತ್ತೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬೈ ಎಲೆಕ್ಷನ್ ವಿಚಾರವಾಗಿ, ಮೂರು ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳೇ ಕಣಕ್ಕೆ ಇಳಿಯುತ್ತಾರೆ. ಹಾಗೇ ಮೂರು ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚನ್ನಪಟ್ಟಣ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಎರಡು ಪಕ್ಷದ ನಾಯಕರು ಕುಳಿತು ಚರ್ಚೆ ಮಾಡುತ್ತಾರೆ. ಅಭ್ಯರ್ಥಿ ಆಯ್ಕೆಯನ್ನು ಹೈಕಮಾಂಡ್ ಫೈನಲ್ ಮಾಡುತ್ತದೆ. ಬೈ ಎಲೆಕ್ಷನ್ ನಲ್ಲಿ ಎರಡು ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡುತ್ತವೆ ಹಾಗೂ ಯಾವುದೇ ಭಿನ್ನಾಭಿಪ್ರಾಯಗಳು ನಮ್ಮಲ್ಲಿ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.