ಮೈಸೂರಿನ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ನಿವೃತ್ತ ಡಿವೈಎಸ್ಪಿ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಆಲನಹಳ್ಳಿ ನಿವಾಸಿ ನಿವೃತ್ತ ಡಿವೈಎಸ್ಪಿ ವಿಜಯಕುಮಾರ್, ವೇಣು, ರಾಜೇಶ್ ಹಾಗೂ ಅಭಿ ಎಂಬುವವರ ವಿರುದ್ಧ ಕೇಸ್ ದಾಖಲಾಗಿದೆ. ಬೆಂಗಳೂರಿನ ಸುಂಕದಕಟ್ಟೆ ನಿವಾಸಿ ಗೌತಮ್ಕುಮಾರ್ರಿಂದ ದೂರು ದಾಖಲಾಗಿದೆ.