ಬಾಗಲಕೋಟೆ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಣ ಸಾಗಿಸುವವರ ಮೇಲೆ ಚುನಾವಣಾಧಿಕಾರಿಗಳು ಮತ್ತು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಇದುವರೆಗೆ ದಾಖಲೆ ಇಲ್ಲದೇ ವಾಹನಗಳಲ್ಲಿ ಸಾಗಿಸುತ್ತಿದ್ದ 7 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ. ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ಬಳಿಕ ಮೊದಲ ಬಾರಿಗೆ ಬಾಗಲಕೋಟೆಯಲ್ಲಿ ಹೆಚ್ಚು ನಗದು ವಶಕ್ಕೆ ಪಡೆಯಲಾಗಿದೆ.
ಶನಿವಾರ ಬೆಳ್ಳಂಬೆಳಗ್ಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅತಿ ಹೆಚ್ಚು ನಗದು ವಶಕ್ಕೆ ಪಡೆಯಲಾಗಿದೆ. ವಿವಿಧ ಚೆಕ್ ಪೋಸ್ಟ್ಗಳಲ್ಲಿ ಒಟ್ಟು 7 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹುನ್ನೂರ ಚೆಕ್ ಪೋಸ್ಟ್ನಲ್ಲಿ 6 ಲಕ್ಷ ರೂ. ಮತ್ತು ಹುಲ್ಯಾಳ ಚೆಕ್ ಪೋಸ್ಟನಲ್ಲಿ 1 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಮಾಹಿತಿ ನೀಡಿದರು.