ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪ
ಹುದಿಕೇರಿಯಲ್ಲಿ ಜನಜಾಗೃತಿ ಮಾನವ ಸರಪಳಿ
ಪ್ರತಿನಿಧಿ ವರದಿ ಮಡಿಕೇರಿ
ಕೊಡಗು ಜಿಲ್ಲೆಯಲ್ಲಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯಲ್ಲಿ ತೊಡಗಿರುವ ಉದ್ಯಮಪತಿ ಬಂಡವಾಳಶಾಹಿಗಳು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಮಾಜ ಸೇವೆಯ ಮುಖವಾಡ ತೊಟ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ.
ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್ಸಿ ವತಿಯಿಂದ ಹುದಿಕೇರಿಯಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಶೀಘ್ರ ತಡೆಯದಿದ್ದಲ್ಲಿ ಕೇರಳದ ವಯನಾಡು ಮಾದರಿಯ ಪ್ರಾಕೃತಿಕ ದುರಂತ ಇಲ್ಲಿಯೂ ಸಂಭವಿಸಬಹುದೆಂದು ಆತಂಕ ವ್ಯಕ್ತಪಡಿಸಿದ್ದಾರೆ.
ಕಪ್ಪುಹಣವನ್ನು ಬಿಳಿ ಮಾಡುವುದಕ್ಕಾಗಿ ಕೊಡಗಿನ ಪ್ರಕೃತಿಯ ಮೇಲೆ ದಾಳಿ ನಡೆಸಿ ರೆಸಾರ್ಟ್, ವಿಲ್ಲಾ, ಟೌನ್ ಶಿಪ್ ಗಳ ನಿರ್ಮಾಣಕ್ಕಾಗಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಡುತ್ತಿರುವ ಮಾಫಿಯಾಗಳು ಅರಣ್ಯ ಪ್ರದೇಶವನ್ನು ಕೂಡ ಒತ್ತುವರಿ ಮಾಡಿಕೊಳ್ಳುತ್ತಿವೆ ಎಂದರು.
ಶ್ರೀಮಂಗಲದಲ್ಲಿ ಜನಜಾಗೃತಿ: ಸಿಎನ್ಸಿ ವತಿಯಿಂದ ಸೆ.30 ರಂದು ಶ್ರೀಮಂಗಲದಲ್ಲಿ ಶಾಂತಿಯುತ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ಮಾಹಿತಿ ನೀಡಿದರು.
ಬೊಜ್ಜಂಗಡ ಯಶ್ಮಾ, ಚಕ್ಕೇರ ಜಾನ್ಸಿ, ಮಂದಂಗಡ ತಾರಾ, ಚಂಗುಲಂಡ ಸೂರಜ್, ಬೊಜ್ಜಂಗಡ ಸುನಿಲ್, ಕೋಳೇರ ರಾಜ, ಬೊಜ್ಜಂಗಡ ಬೋಪಣ್ಣ, ಬೊಜ್ಜಂಗಡ ತಮ್ಮಯ್ಯ, ದಡ್ಡೇರ ಸುರೇಶ್, ನೂರೇರ ಚಿಟ್ಟಿಯಪ್ಪ, ಮಂಡೇಚಂಡ ಪೊನ್ನಪ್ಪ, ಮಂಡಂಗಡ ಬೋಪಣ್ಣ, ಬಲ್ಯಮಿದೇರಿರ ಪ್ರಕಾಶ್, ಚಕ್ಕೇರ ರಮೇಶ್, ಬಲ್ಯಮಾಡ ಸೋಮಯ್ಯ, ಬಲ್ಯಮಾಡ ನಂಜಪ್ಪ, ಮಂದಂಗಡ ವಸಂತ್, ಬಲ್ಯಮಾಡ ಅಯ್ಯಪ್ಪ, ಅಚೆಯಾಡ ಸುಕ್ದೇವ, ಚಕ್ಕೇರ ಪ್ರಭು, ಕಿರಿಯಮಾಡ ಮಿಲನ್, ಚೊಟ್ಟೆಯಂಡಮಾಡ ಬಿಪಿನ್, ಅಜ್ಜಿಕುಟ್ಟಿರ ಲೋಕೇಶ್, ಬೊಟ್ಟಂಗಡ ಗಿರೀಶ್, ಅಪ್ಪೆಯಂಗಡ ಮಾಲೆ ಪಾಲ್ಗೊಂಡಿದ್ದರು.