ಮೈಸೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ನ್ಯಾಯಾಲಯವು ಆದೇಶ ಹೊರಡಿಸಿದೆ.
ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್ ಜಡ್ಸ್ ಮತ್ತು ಜೆಎಂಎಫ್ಸಿ ಕೋರ್ಟ್ ನಲ್ಲಿ ಇಂದು ನಡೆದ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೃರು ಹಾಜರಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದೆ. ಕುಮಾರ್ ಎಂಬುವವರು 30-06-2015ರಲ್ಲಿ ಸ್ನೇಹಮಹಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣವನ್ನು ದಾಖಲಿಸಿದ್ದರು. ವಿಚಾರಣಾ ಹಂತದಲ್ಲಿದ್ದ ಕಾರಣ ನಿನ್ನೆ ಅಕ್ಟೋಬರ್ 1 ರಂದು ಸ್ನೇಹಮಹಿ ಕೃಷ್ಣ ವಿಚಾರಣೆಗೆ ಗೈರಾದ ಹಿನ್ನೆಲೆ, ನ್ಯಾಯಾಲಯದಿಂದ ಜಾಮೀನು ರಹಿತ ಬಂಧನಕ್ಕೆ ಆದೇಶವನ್ನು ಹೊರಡಿಸಲಾಗಿದೆ.