ಪ್ರತಿನಿಧಿ ವರದಿ ಚಾಮರಾಜನಗರ
ಜಿಲ್ಲೆಯಾದ್ಯಂತ ಬರ ನಿರ್ವಹಣೆ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಕಂಡು ಬಂದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯ ವಿಪತ್ತು ನಿರ್ವಹಣಾ ಕೊಠಡಿಯ ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಶಿಲ್ಪಾ ನಾಗ್ ತಿಳಿಸಿದ್ದಾರೆ.
ಬರ ನಿರ್ವಹಣೆ ಹಿನ್ನೆಲೆಯಲ್ಲಿ ಗ್ರಾಮಾಂತರ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಈಗಾಗಲೇ ಅಗತ್ಯಕ್ಕೆ ಅನುಗುಣವಾಗಿ ಹನೂರು ತಾಲೂಕಿನ ಕೌದಳ್ಳಿ, ವಿ.ಎಸ್. ದೊಡ್ಡಿ, ಕೆಂಚಯ್ಯನದೊಡ್ಡಿ, ಶಾಗ್ಯ, ಕಳ್ಳಿದೊಡ್ಡಿ, ಗಾಣಿಗಮಂಗಲ, ರಾಮಾಪುರ, ಶೆಟ್ಟಿಹಳ್ಳಿ, ಅರಬಗೆರೆ-75, ಭದ್ರಯ್ಯನಹಳ್ಳಿ, ಮುನಿಶೆಟ್ಟಿದೊಡ್ಡಿ, ಹೊಸಹಳ್ಳಿ, ದಂಟಳ್ಳಿ, ಎಲ್.ಪಿ.ಎ ಕ್ಯಾಂಪ್ ಮತ್ತು ಕುರಟ್ಟಿ ಹೊಸೂರು ಗ್ರಾಮಗಳಲ್ಲಿ ಗೋಶಾಲೆಗಳನ್ನು ತೆರೆಯಲಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಇನ್ನಿತರ ತಾಲೂಕಿನ ಗ್ರಾಮಗಳಲ್ಲಿ ಗೋಶಾಲೆಗಳನ್ನು ತೆರೆಯಬೇಕಾಗಿದೆ.
ಜಾನುವಾರುಗಳಿಗೆ ಮೇವಿನ ಕೊರತೆ ಇರುವ ಗ್ರಾಮಗಳ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿ ವಿಪತ್ತು ನಿರ್ವಹಣಾ ಕೊಠಡಿ ಟೋಲ್ ಫ್ರೀ ದೂ.ಸಂ.1077, ವಿಪತ್ತು ನಿರ್ವಹಣಾ ಕೊಠಡಿ ವಾಟ್ಸಪ್ ಸಂ.9740942901 ಹಾಗೂ ಸ್ಥಿರ ದೂ.ಸಂ. 08226-223160, 223161, 223163 ಸಂಪರ್ಕಿಸಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.