ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾಹಿತಿ
ಪ್ರತಿನಿಧಿ ವರದಿ ಹನೂರು
ತಾಲೂಕು ಪಂಚಾಯತಿ ಕಚೇರಿಗೆ ಹುಲ್ಲೆಪುರ ಗ್ರಾಮದಲ್ಲಿ ಸರ್ಕಾರಿ ನಿವೇಶನ ಗುರುತಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುದಾನ ಬಂದ ನಂತರ ಹೊಸ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ತಿಳಿಸಿದರು.
ಹನೂರು ಪಟ್ಟಣದ ತಾಪಂ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕು ಕೇಂದ್ರದಲ್ಲಿ ಈ ಹಿಂದೆ ಇದ್ದಂತ ಕಚೇರಿಯು ಸಾರ್ವಜನಿಕರಿಗೆ, ಅಂಗವಿಕಲರಿಗೆ ಮೊದಲ ಅಂತಸ್ತಿನಲ್ಲಿರುವುದರಿಂದ ತೊಂದರೆಯಾಗುತಿತ್ತು, ಆದ್ದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಇತ್ತದೃಷ್ಟಿಯಿಂದ ಬಂಡಳ್ಳಿ ರಸ್ತೆಯಲ್ಲಿ ನೂತನವಾಗಿ ಉದ್ಘಾಟನೆ ಮಾಡಲಾಗಿದೆ ಎಂದು ತಿಳಿಸಿದರು.
ತಾಪಂ ಇಒ ಉಮೇಶ್ ಮಾತನಾಡಿ, ನೂತನವಾಗಿ ಕಚೇರಿಯನ್ನು ತೆರಯಲಿದ್ದು, ಇಲ್ಲಿ ಎಲ್ಲ ರೀತಿಯ ಸೌಲಭ್ಯಗಳಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಎ.ಡಿ.ರವೀಂದ್ರ, ಪಿಡಿಒ ಶಿವಕುಮಾರ್, ಸುರೇಶ್, ರಾಮು, ನಂಜುಂಡಸ್ವಾಮಿ, ಸಿದ್ದಪ್ಪ, ಮಾದೇಶ್, ವಿಶ್ವನಾಥ್, ನಂದೀಶ್ ಇದ್ದರು.