ಪ್ರತಿನಿಧಿ ವರದಿ ಹೊಳೆನರಸೀಪುರ
ತಾಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಹಾವು ಕಚ್ಚಿದ ರೈತ ಮಹಿಳೆಯಬ್ಬರು ಸಾವನ್ನಪ್ಪಿದ್ದಾರೆ
ಚಂದ್ರಮ್ಮ (60) ಮೃತ ದುರ್ದೈವಿ ಮಹಿಳೆ. ಶನಿವಾರ ತಮ್ಮ ಜಮೀನಿನಲ್ಲಿ ಕಳೆ ಕೀಳುತ್ತಿದ್ದ ವೇಳೆ ಚಂದ್ರಮ್ಮರ ಬಲಗೈಗೆ ಹಾವು ಕಚ್ಚಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅವರನ್ನು ಹೊಳೆನರಸೀಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆ ವೇಳೆಗಾಗಲೇ ಮಹಿಳೆಯು ಮೃತಪಟ್ಟಿದ್ದರು. ಮಹಿಳೆಯ ಬಲಿ ಪಡೆದ ಹಾವನ್ನು ಸೆರೆ ಹಿಡಿದು ಕಾಡಿಗೆ ಬಿಡಲಾಯಿತು.ಘಟನೆಯ ಸಂಬಂಧ ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.