ನಂಜನಗೂಡು ತಾಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆಡಿಯಾಲ ಗ್ರಾಮದ ಮಣಿಕಂಠ (37) ಮೃತ ದುರ್ದೈವಿ. ಯುವಕ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟೆ ಸೇರಿದಂತೆ ಇತರೆ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.