ಪ್ರತಿನಿಧಿ ವರದಿ ಕೃಷ್ಣರಾಜಪೇಟೆ
ನಿರಂತರ ಪರಿಶ್ರಮದಿಂದ ಸಾಧನೆ ಮಾಡಿ. ಸಾಧನೆ ಎನ್ನುವುದು ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ ಎನ್ನುವುದನ್ನು ತಿಳಿಯಬೇಕು ಎಂದು ನಾಡಿನ ಖ್ಯಾತ ವೃತ್ತಿ ಕೌಶಲ್ಯ ತರಬೇತಿ ಮಾರ್ಗದರ್ಶಕರಾದ ಶಂಕರ್ ಬೆಳ್ಳೂರು ಹೇಳಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಆಯೋಗಿಸಿದ್ದ ಎಸ್.ಎಸ್. ಎಲ್.ಸಿ ಹಾಗೂ ಪಿಯುಸಿ ವ್ಯಾಸಂಗದ ನಂತರ ಮುಂದೇನು ಎಂಬ ಅರಿವಿನ ಜಾಗೃತಿ ಕುರಿತು ಮಾತನಾಡಿದರು.
ವಿದ್ಯಾರ್ಥಿಗಳು ಏಕಾಂಗ್ರತೆಯಿಂದ ವ್ಯಾಸಂಗ ಮಾಡಿ ಗುರಿ ಸಾಧನೆ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಸವಾಲುಗಳಿಗೆ ಹೆದರದೇ ಆತ್ಮವಿಶ್ವಾಸದಿಂದ ಮುನ್ನಡೆದು ಸಾಧಕರಾಗಿ ಹೊರಹೊಮ್ಮಬೇಕು ಎಂದು ವೃತ್ತಿ ಕೌಶಲ್ಯ ಮಾರ್ಗದರ್ಶನ ತರಬೇತುದಾರ ಶಂಕರ್ ಕಿವಿಮಾತು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾದ ಡಾ.ರಾಘವೇಂದ್ರಪ್ರಸಾದ್, ರಾಜ್ಯ ಆರ್ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ, ಪಿರಿಯಾಪಟ್ಟಣ ಸುರೇಶ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ಕೆ.ಆರ್.ನೀಲಕಂಠ ಮಾತನಾಡಿದರು.
ಆದಿಚುಂಚನಗಿರಿಯ ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿಗಳಾದ ಡಾ. ರಾಮಕೃಷ್ಣೆಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ನೂರಾರು ಪ್ರತಿಭೆಗಳಿಗೆ ಆ ಪ್ರತಿಭೆಗಳಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ತರಬೇತಿ ನೀಡಿದರೆ ಸಾಧನೆ ಮಾಡಲು ಸಾಧ್ಯವಿದೆ. ಈ ದಿಕ್ಕಿನಲ್ಲಿ ಸೂಕ್ತ ಮಾರ್ಗದರ್ಶನ ತರಬೇತಿ ನೀಡಲು ನಮ್ಮ ಜಿಲ್ಲೆಯವರೇ ಆಗಿರುವ ಖ್ಯಾತ ಮಾರ್ಗದರ್ಶಕರಾದ ಶಂಕರ ಬೆಳ್ಳೂರು ಅವರ ಮೂಲಕ ಸಂವಾದ ನಡೆಸಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದೇವೆ ಎಂದರು.
Leave a comment