ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಮತ್ತು A2 ಆರೋಪಿಗಳಾದ ಪವಿತ್ರಾಗೌಡ ಹಾಗೂ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಬೆಂಗಳೂರಿನ 57ನೇ ಸೆಷನ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು , ದರ್ಶನ್ ಹಾಗೂ ಪವಿತ್ರಾ ಪರ ವಕೀಲರು ವಾದ ಮಂಡಿಸಲಿದ್ದಾರೆ. ಕಳೆದ 3 ಹಿಯರಿಂಗ್ ಗಳಿಂದ ಜಾಮೀನಿಗಾಗಿ ಇಬ್ಬರು ಅರ್ಜಿ ಸಲ್ಲಿಸುತ್ತಿದ್ದಾರೆ. ಕೋರ್ಟ್ ಎರಡೂ ಕಡೆ ವಾದ ಹಾಗೂ ಪ್ರತಿವಾದಗಳನ್ನ ಆಲಿಸುತ್ತಿದೆ. ಇವತ್ತು ಇಬ್ಬರಿಗೂ ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ. ಸಾಕ್ಷಿಗಳನ್ನ ಪ್ಲಾಂಟ್ ಮಾಡಲಾಗಿದೆ ಎಂದು ದರ್ಶನ್ ಪರ ವಕೀಲರು ವಾದಿಸಿದ್ದಾರೆ. ಇನ್ನು, ಪವಿತ್ರ ಗೌಡ ಪರ ವಕೀಲರು ತಮ್ಮ ಕಕ್ಷಿದಾರರಿಗೂ ಕೊಲೆಗೂ ಸಂಬಂಧವೇ ಇಲ್ಲ ಎಂದು ವಾದಿಸಿದ್ದಾರೆ.