ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲು ಸೇರಿ 4 ತಿಂಗಳುಗಳೇ ಸಮೀಪಿಸಿದೆ. ಇಂದು ಪ್ರಕರಣ ಎ1 ಆರೋಪಿ ಪವಿತ್ರಾ ಗೌಡ & ಎ2 ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಶುಕ್ರವಾರ ಇವರಿಬ್ಬರಿಗೆ ನಿರ್ಣಾಯಕ ದಿನವಾಗಿದೆ. ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಸೆಷನ್ಸ್ ಕೋರ್ಟ್ನಲ್ಲಿ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ ಹಾಗೂ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಈ ವೇಳೆ ದರ್ಶನ್ಗೆ ಜಾಮೀನು ಸಿಗಲಿದೆ ಎನ್ನುವ ಭರವಸೆಯಲ್ಲಿ ಅಭಿಮಾನಿಗಳು ಹಾಗೂ ಪತ್ನಿ ವಿಜಯಲಕ್ಷ್ಮಿ, ಕುಟುಂಬಸ್ಥರು ಸೇರಿದಂತೆ ಆಪ್ತರು ಇದ್ದಾರೆ ಎನ್ನಲಾಗುತ್ತಿದೆ. ಸೆಪ್ಟೆಂಬರ್ 30ರಂದು 57ನೇ ಸೆಷನ್ ಕೋರ್ಟ್ನಲ್ಲಿ ದರ್ಶನ್ ಪರ ವಕೀಲರು ವಾದ ಮಂಡನೆ ಮಾಡಲು ಅವಕಾಶ ಬೇಕು ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದ್ದು, ಈ ಹಿನ್ನೆಲೆ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿ ಆದೇಶ ಹೊರಡಿಸಿತ್ತು. ಇನ್ನು ಈ ಮಧ್ಯೆ ದರ್ಶನ್ ಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆಯನ್ನ ಕೂಡ ಪಡೆದಿದ್ದಾರೆ. ಈ ಅಂಶವೂ ಕೂಡ ಜಾಮೀನು ಪಡೆಯಲು ಸಹಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ.