ದೇವನಹಳ್ಳಿ: ತಾಲೂಕಿನ ಕುಂದಾಣ ಗ್ರಾಮದಲ್ಲಿ ಕುಂದಾಣ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ (ಎಂಪಿಆರ್ ಎಸಿಎಸ್)ನ 2023-24 ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ಬಸವರಾಜು.ಎಚ್ ಅಧ್ಯಕ್ಷತೆ ಯಲ್ಲಿ ಜೂ. 15ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಸಂಘದ ಕಚೇರಿ ಆವರಣದಲ್ಲಿ ನಡೆಯಲಿರುವ ಸಭೆಯಲ್ಲಿ ಸರ್ವ ಸದಸ್ಯರು ಸಕಾಲಕ್ಕೆ ಭಾಗವಹಿಸಬೇಕು ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ರಮೇಶ್ ತಿಳಿಸಿದರು.