ಹುಣಸೂರು: ಸಂವಿಧಾನ ಶಿಲ್ಪಿ ಅಂಬೇಡ್ಕರ್ ನೀಡಿರುವ ಸಂವಿಧಾನ ದೇಶದ ಉಳ್ಳವರು ಮತ್ತು ಇಲ್ಲದವರು ಒಂದಾಗಿ ಬಾಳುವ ಅವಕಾಶ ನೀಡಿದ್ದು, ವೈವಿಧ್ಯಮಯ ದೇಶವನ್ನು ಒಂದಾಗಿಸಿರುವುದೇ ಅಂಬೇಡ್ಕರ್ ನೀಡಿದ ಸಂವಿಧಾನದಿAದಾಗಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ಅಭಿಪ್ರಾಯಪಟ್ಟರು.
ತಾಲೂಕಿನ ಬಾಚಳ್ಳಿಯ ಅಂಬೇಡ್ಕರ್ ಕಾಲನಿಯಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಅಂಬೇಡ್ಕರ್ರ ೧೩೩ನೇ ಜಯಂತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಅಂಬೇಡ್ಕರ್ ಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್ ಜಯಂತಿಗಳು ಬರೀ ಭಾಷಣಗಳಾಗದೆ ಎಲ್ಲರ ಮನ- ಮನೆಗಳಲ್ಲಿ ಆಚರಣೆ ಮಾಡುವಂತಾಗಬೇಕು. ಅಂಬೇಡ್ಕರ್ ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆಯ ವಿರುದ್ಧ ಹೋರಾಟ ಮಾಡಿದ ಮಹಾನ್ ಮಾನವತಾವಾದಿ. ಸಂವಿಧಾನದ ಮೂಲಕ ಎಲ್ಲಾ ಜಾತಿ, ಧರ್ಮ, ಭಾಷೆಯ ಜನರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟರು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಈ ಕಾಲನಿಯ ಬಡಕುಟುಂಬಗಳು ತಮ್ಮ ಮಕ್ಕಳಿಗೆ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಲು ಮುಂದಾಗಬೇಕು. ಅವರ ಆದರ್ಶಗಳನ್ನು ತಮ್ಮ ಮನೆ ಮತ್ತು ಮನಗಳಲ್ಲಿ ಪ್ರತಿನಿತ್ಯ ಪಾಲಿಸಬೇಕು. ಆಗಮಾತ್ರ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಕ್ಕೆ ಒಂದು ಅರ್ಥ ಬರುತ್ತದೆ ಎಂದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗರಾಜ್ ಮಲ್ಲಾಡಿ ಮಾತನಾಡಿದರು.
ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಬಿಇಒ ಎಸ್.ರೇವಣ್ಣ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದರಾಜು ಮಾತನಾಡಿದರು. ನಗರಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್, ಗೋವಿಂದನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ರಾಜ್ಕುಮಾರ್, ಕಾರ್ಯದರ್ಶಿ ಲೋಕೇಶ, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಬಸವಲಿಂಗಯ್ಯ, ದಲಿತ ಮುಖಂಡ ಕೆ. ನಂಜಪ್ಪ ಬಸವನಗುಡಿ, ಬಲ್ಲೇನಹಳ್ಳಿ ಕೆಂಪರಾಜು, ಸತ್ಯ ಎಂ.ಎ.ಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ, ರಾಜು ಚಿಕ್ಕಹುಣಸೂರು, ಅಂಬೇಡ್ಕರ್ ನಗರ ಗ್ರಾಮಸ್ಥರಾದ ಶೇಖರ, ಹರೀಶ, ಶಿವಲಿಂಗ, ಮುರುಗೇಶ, ಮಾದು, ಗೋಪಾಲ, ವಸಂತ, ಶೋಭಾ, ಮುತ್ತುರಾಜು, ಗಜೇಂದ್ರ, ದಲಿತ ಮಹಿಳಾ ಒಕ್ಕೂಟದ ಲಕ್ಷ್ಮೀ , ರೇಣುಕಾ ಮುಂತಾದ ನೂರಾರು ಗ್ರಾಮಸ್ಥರು, ಚಿಕ್ಕಹುಣಸೂರು ಯಜಮಾನರುಗಳು, ಮಹಿಳೆಯರು, ಮಕ್ಕಳು ಹಾಜರಿದ್ದು ಹಬ್ಬವನ್ನು ಆಚರಿಸಿದರು. ಕಾರ್ಯಕ್ರಮಕ್ಕೂ ಮುನ್ನ ಕಾಲನಿಯ ಬೀದಿಗಳಲ್ಲಿ ಮಂಗಳ ವಾದ್ಯದೊಂದಿಗೆ. ಅಂಬೇಡ್ಕರ್ ಭಾವಚಿತ್ರದೊಂದಿಗೆ ಮೆರವಣಿಗೆ ಮಾಡಿ, ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಲಾಯಿತು.
೧೨ಊUಓ೩: ಹುಣಸೂರು ತಾಲೂಕು ಅಂಬೇಡ್ಕರ್ ಕಾಲನಿಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಹಬ್ಬ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ನಿಂಗರಾಜ ಮಲ್ಲಾಡಿ, ಹೊಸೂರು ಕುಮಾರ್, ಕೆಂಪರಾಜು, ನಂಜಪ್ಪ ಬಸವನಗುಡಿ, ಇಒ ಶಿವಕುಮಾರ್, ಬಿಇಒ ಎಸ್.ರೇವಣ್ಣ ಇತರರಿದ್ದಾರೆ.