ಪ್ರತಿನಿಧಿ ವರದಿ ಮೈಸೂರು
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ನೀಡಲಾಗುವ 2023-24ನೇ ಸಾಲಿನ ಜೀವಮಾನ ಸಾಧನೆ, ಹಿರಿಯ ಪತ್ರಕರ್ತರು, ಛಾಯಾಗ್ರಹಕರು ಸೇರಿದಂತೆ ವರ್ಷದ ಕನ್ನಡ, ಇಂಗ್ಲಿಷ್ ವರದಿಗಳು, ಅತ್ಯುತ್ತಮ ಛಾಯಾಚಿತ್ರ ಹಾಗೂ ವಿದ್ಯುನ್ಮಾನ ವರದಿಗೆ ಪ್ರಶಸ್ತಿ ಘೋಷಿಸಲಾಗಿದೆ.
ಈ ಸಾಲಿನಲ್ಲಿ ಪತ್ರಿಕೋದ್ಯಮ ಕ್ಷೇತ್ರದ ಜೀವಮಾನ ಸಾಧನೆಗೆ ಹಿರಿಯ ಪತ್ರಕರ್ತ ದಿನತಂತಿ ಪತ್ರಿಕೆಯ ಎಂ.ಎನ್.ಕಿರಣ್ ಕುಮಾರ್, ವರ್ಷದ ಹಿರಿಯ ಗ್ರಾಮಾಂತರ ಪತ್ರಕರ್ತ ಪ್ರಶಸ್ತಿಗೆ ಸಾಲಿಗ್ರಾಮ ಯಶವಂತ್ ( ಪ್ರಜಾವಾಣಿ), ಹಿರಿಯ ಸುದ್ಧಿ ಸಂಪಾದಕ ಪ್ರಶಸ್ತಿಗೆ ಕೆ.ಎನ್. ನಾಗಸುಂದ್ರಪ್ಪ (ವರ್ತಮಾನ್), ಹಿರಿಯ ಛಾಯಾಗ್ರಾಹಕ ಪ್ರಶಸ್ತಿಗೆ ಶ್ರೀರಾಮ್ (ದಿ ಹಿಂದು), ದೃಶ್ಯ ಮಾಧ್ಯಮ ಪ್ರಶಸ್ತಿಗೆ ಮಹೇಶ್ ಶ್ರವಣಬೆಳಗೊಳ (ಈ ಟಿವಿ ಭಾರತ್), ದೃಶ್ಯ ಮಾಧ್ಯಮ ಹಿರಿಯ ವಿಡಿಯೋಗ್ರಫರ್ ಪ್ರಶಸ್ತಿಗೆ ಎಸ್.ನಾಗೇಶ್ (ವಿಸ್ತಾರ ಟಿವಿ) ಅವರುಗಳನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಪುರಸ್ಕೃತರು :.
ಈ ಸಾಲಿನ ಉತ್ತಮ ಕನ್ನಡ ವರದಿಗೆ ಎಚ್.ಎಸ್. ಸಚಿತ್ (ಪ್ರಜಾವಾಣಿ), ಇಂಗ್ಲೀಷ್ ವರದಿಗೆ ಶಿಲ್ಪಾ.ಪಿ (ಡೆಕ್ಕನ್ ಹೆರಾಲ್ಡ್), ಉತ್ತಮ ಫೋಟೋಗ್ರಾಫಿ ಎಸ್. ಉದಯ್ ಶಂಕರ್(ಇಂಡಿಯನ್ ಎಕ್ಸ್ ಪ್ರೆಸ್ಸ್), ವಿದ್ಯುನ್ಮಾನ ಮಾಧ್ಯಮದ ವರದಿ ಪ್ರಶಸ್ತಿಗಳಿಗೆ ಜಯಂತ್ ಮತ್ತು ರಾಮು (ದೂರದರ್ಶನ) ಅವರುಗಳು ಭಾಜನರಾಗಿದ್ದಾರೆ. ಎಲ್ಲ ಅಭಿನಂದಿತರು ಮತ್ತು ಪ್ರಶಸ್ತಿ ವಿಜೇತರಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದು, ಸೆ.21ರಂದು ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.