ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 2022-23ನೆ ಸಾಲಿನ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳನ್ನು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಶುಕ್ರವಾರ ಪ್ರದಾನ ಮಾಡಲಾಯಿತು. ಹೊಸದಿಲ್ಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯದ ಕಾರ್ಯದರ್ಶಿಗಳು, ಅನುರಾಗ್ ಜೈನ್, ಎಎಸ್ಆರ್ಟಿಯು ಅಧ್ಯಕ್ಷ ಡಾ.ಮಾಧವ್ ಖುಸೇಕರ್ ಸೇರಿದಂತೆ ಇನ್ನಿತರರು ಕೆಎಸ್ಸಾರ್ಟಿಸಿಯ ಹಿರಿಯ ಅಧಿಕಾರಿ ಯಶ್ವಂತ್ ಕುಮಾರ್ ಪಿ. ಅವರು ಸ್ವೀಕಾರ ಮಾಡಿದರು.
ಮಾರ್ಚ್ 15 ರಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ಕಚೇರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶ್ರೀ.ಅನುರಾಗ್ ಜೈನ್,ಭಾಆಸೇ, ಕಾರ್ಯದರ್ಶಿಗಳು, ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವಾಲಯ, ಭಾರತ ಸರ್ಕಾರ, ಹಾಗೂ ಅಧ್ಯಕ್ಷರು ಎ.ಎಸ್. ಆರ್. ಟಿ ಯು, ಡಾ.ಮಾಧವ್ ಖುಸೇಕರ್ ಭಾಆಸೇ, ಉಪಾಧ್ಯಕ್ಷರು, ಎ.ಎಸ್ .ಆರ್. ಟಿ .ಯು, ವ್ಯವಸ್ಥಾಪಕ ನಿರ್ದೇಶಕರು, ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆ ರವರು ಹಾಗೂ ಶ್ರೀ. ಪರೇಶ್ ಗೋಯೆಲ್ ನಿರ್ದೇಶಕರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರವರು ನಿಗಮಕ್ಕೆ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಉಪಕ್ರಮಕ್ಕಾಗಿ ಎರಡು ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು. ಶ್ರೀ ಯಶ್ವಂತ್ ಕುಮಾರ್ ಪಿ, ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಾಗಾರ, ಬೆಂಗಳೂರು ರವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ಪಂಜಾಬ್ ನಾಯಕತ್ವ ಪ್ರಶಸ್ತಿ
ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಉಪ ಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ ಲಭಿಸಿದೆ. ನಿನ್ನೆ ತಾಜ್ ಚಂಡೀಗಡದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶ್ರೀ ಹರ್ಜಿಂದರ್ ಸಿಂಗ್ ಚೀಮಾ, ಅಧ್ಯಕ್ಷರು ಚೀಮಾ ಬಾಯ್ಲರ್ಸ್ ಲಿಮಿಟೆಡ್ ರವರು ನಿಗಮಕ್ಕೆ ಪಂಜಾಬ್ ನಾಯಕತ್ವ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಶ್ರೀ ಶ್ರೀನಿವಾಸಮೂರ್ತಿ ಸಿ. ಈ, ವಿಭಾಗೀಯ ನಿಯಂತ್ರಣಾಧಿಕಾರಿ, ದಾವಣಗೆರೆ ವಿಭಾಗ ಹಾಗೂ ಶ್ರೀಮತಿ ಸ್ವರ್ಣ ಲತಾ ಎಂ, ಅಂಕಿ ಅಂಶ ಅಧಿಕಾರಿ, ಕೇಂದ್ರ ಕಛೇರಿ ರವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.