ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಪಹರಣ ಪ್ರಕರಣ ಬೆಳಕಿಗೆ ಬಂದಿದೆ. ಈ ಅಪಹರಣ ಪ್ರಕರಣದಲ್ಲಿ ಲೇಡಿ ಗ್ಯಾಂಗ್ ಜೊತೆ ಕನ್ನಡ ಪರ ಸಂಘಟನೆ ಅಧ್ಯಕ್ಷ ಪ್ರಕಾಶ್ ಹೆಸರು ಸಹ ಕೇಳಿ ಬಂದಿದೆ. ಘಟನೆ ಸಂಬಂಧ ಶಂಕರಪುರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕಾಶ್ ಅಲಿಯಾಸ್ ಕನ್ನಡ ಪ್ರಕಾಶ್ & ಗ್ಯಾಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬ್ಯಾಂಕ್ ಉದ್ಯೋಗಿಯಾಗಿರುವ ಮಂಜುನಾಥ್ ಅವರನ್ನು ಪ್ರಕಾಶ್ & ಗ್ಯಾಂಗ್ ಅಪಹರಿಸಿತ್ತು. ಕಿಡ್ನಾಪ್ ಮಾಡಿದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಕನ್ನಡ ಪ್ರಕಾಶ್ಗೆ ಸೇರಿದ ಕಚೇರಿಯಲ್ಲಿ ಮಂಜುನಾಥ್ ಅವರನ್ನು ಕರೆದುಕೊಂಡು ಬಂದು ಥಳಿಸಲಾಗಿತ್ತು. ಅಪಹರಿಸಿ ಹಣ, ಮನೆ ದಾಖಲೆಗಳನ್ನು ಕಸಿದುಕೊಂಡ ಆರೋಪ ಕೇಳಿ ಬಂದಿದೆ.
ಇನ್ನು ಮತ್ತೊಂದೆಡೆ ಅಪಹರಣಕ್ಕೊಳಗಾದ ಮಂಜುನಾಥ್ ಅವರು ಮಂಜುಳಾ ಎಂಬುವರ ಬಳಿ 8 ಲಕ್ಷ ಸಾಲ ಪಡೆದಿದ್ದರು. ಆದರೆ ಸಾಲ ಪಡೆದಿದ್ದ ಹಣ ವಾಪಸ್ ನೀಡದೆ ಮಂಜುನಾಥ್ ಸತಾಯಿಸಿದ್ದರು. ಹೀಗಾಗಿ ಮಂಜುಳಾ ಅವರು ಕನ್ನಡ ಪ್ರಕಾಶ್ ಜೊತೆ ಸೇರಿ ಕಿಡ್ನ್ಯಾಪ್ ಪ್ಲ್ಯಾನ್ ಮಾಡಿದ್ದರು. ಮಂಜುನಾಥ್ನನ್ನು ಕಿಡ್ನ್ಯಾಪ್ ಮಾಡಿ ದಾಖಲೆ ಕಿತ್ತುಕೊಂಡಿದ್ದರು. ಸದ್ಯ ಮಂಜುಳಾ, ಪ್ರಕಾಶ್, ಚಲಪತಿ ಸೇರಿ 6 ಆರೋಪಿಗಳ ವಿರುದ್ಧ FIR ದಾಖಲಾಗಿದೆ.