ಮಹಾಶಿವರಾತ್ರಿ ಹಬ್ಬದಂದು ಅರಮನೆ ಆವರಣದಲ್ಲಿರುವ ತ್ರಿನಯನೇಶ್ವರ ದೇವಸ್ಥಾನದಲ್ಲಿರುವ ಶಿವನಿಗೆ 11 ಕೆಜಿ ತೂಕದ ಚಿನ್ನದ ಶಿವನ ಮುಖವಾಡದ ಕೊಳಗವನ್ನು ಧಾರಣೆ ಮಾಡಲಾಗುತ್ತದೆ. ಆ ಚಿನ್ನದ ಕೊಳಗವನ್ನು ಜಿಲ್ಲಾ ಖಜಾನೆಯಿಂದ ಇಂದು ದೇವಸ್ಥಾನಕ್ಕೆ ನೀಡಲಾಯಿತು.
ಅಂಬಾವಿಲಾಸ ಅರಮನೆಯ ಆವರಣದಲ್ಲಿರುವ ಶ್ರೀ ತ್ರಿನಯನೇಶ್ವರ ದೇವಸ್ಥಾನದಲ್ಲಿರುವ ಶಿವನಿಗೆ ಮಹಾಶಿವರಾತ್ರಿ ಹಬ್ಬದಂದು ಬೆಳಗಿನ ಜಾವ ವಿಶೇಷ ಅಭಿಷೇಕ ಹಾಗೂ ಪೂಜೆ ಸಲ್ಲಿಸಲಾಗುತ್ತದೆ. ಈ ಸಂದರ್ಭದಲ್ಲಿ ಶಿವನಿಗೆ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ನೀಡಿರುವ 11 ಕೆಜಿ ತೂಕದ ಬಾಲ ಶಿವನ ಕೊಳವನ್ನ ತೊಡಿಸಲಾಗುವುದು. ಆನಂತರ ಶಿವರಾತ್ರಿ ಪೂಜೆಗಳು ನಡೆಯಲಿದೆ. ಹೀಗಾಗಿ ಇಂದು ಪೊಲೀಸ್ ಭದ್ರತೆಯೊಂದಿಗೆ ಅರಮನೆಗೆ 11 ಕೆ.ಜಿ. ತೂಕದ ಅಪರಂಜಿ ಚಿನ್ನದ ಕೊಳಗ ಹಸ್ತಾಂತರ ಮಾಡಲಾಗಿದ್ದು, ನಾಳೆ ಬೆಳಗ್ಗೆ ತ್ರೀನೇಶ್ವರನಿಗೆ ಚಿನ್ನದ ಮುಖವಾಡ ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.