ಹಾಸನ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪಿ.ಲಂಕೇಶ್ ಕೃತಿಗಳ ಅಧ್ಯಯನ ಕುರಿತ ರಾಜ್ಯಮಟ್ಟದ ಶಿಬಿರಕ್ಕೆ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಕನ್ನಡ ಜಾಣ-ಜಾಣೆಯರ ವೇದಿಕೆ ಸಹಯೋಗದಲ್ಲಿ ಸೆಪ್ಟೆಂಬರ್ ಕೊನೆ ವಾರದಲ್ಲಿ ಹಾಸನದಲ್ಲಿ 3 ದಿನಗಳ ಪಿ.ಲಂಕೇಶ್ ಕೃತಿಗಳ ಅಧ್ಯಯನ ಶಿಬಿರ ಆಯೋಜಿಸಲಾಗುತ್ತಿದೆ. 20 ವರ್ಷದಿಂದ 40 ವರ್ಷದೊಳಗಿನ ಆಸಕ್ತರು ಶಿಬಿರದಲ್ಲಿ ಪಾಲ್ಗೊಳ್ಳಲು ಆ.17ರೊಳಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸಾಹಿತ್ಯ ಅಕಾಡೆಮಿಯ https:// karnatakasahithyaacademyorg ವೈಬ್ಸೈಟ್ನಲ್ಲಿ ಅರ್ಜಿ ಪಡೆದುಕೊಳ್ಳಬಹುದು ಎಂದು ತಿಳಿಸಿದೆ.