ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಮತ್ತು ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು, ಇವರಿಂದ ಅನುಷ್ಠಾನಗೊಂಡಿರುವ ‘ಯುವ ಸ್ವಂದನ’ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವಪರಿವರ್ತಕರು ಹಾಗೂ ಯುವಸಮಲೋಚಕರನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಯಾವುದೇ ಪದವಿ ಅಥವಾ ಮೇಲ್ಪಟ್ಟ ಯಾವುದೇ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು 21 ರಿಂದ 35 ವರ್ಷದ ವಯೋಮಿತಿಯವರಾಗಿಬೇಕು. ಅಭ್ಯರ್ಥಿಗಳು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಜನವರಿ 23ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣ, ಗೇಟ್ ನಂ.12, ಕೊಠಡಿ ಸಂಖ್ಯೆ: 17 ಮತ್ತು 18, ಬೆಂಗಳೂರು-01 ಇಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 080-22239771 ಅಥವಾ 9480886545 ಮೂಲಕ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.