ಪ್ರತಿನಿಧಿ ವರದಿ ಮಡಿಕೇರಿ
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸುವ ಸಂಬಂಧ 2024-25ನೇ ಸಾಲಿನಲ್ಲಿ ವೃತ್ತಿ ತರಬೇತಿಗೆ ಪರಿಶಿಷ್ಟ ವರ್ಗದ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಪರಿಶಿಷ್ಟ ಪಂಗಡ ಜಾತಿಗೆ ಸೇರಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಯ ಮತ್ತು ಪೋಷಕರ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ಯಾವುದೇ ಪದವಿ ನಂತರ 3 ವರ್ಷಗಳ ಅಥವಾ ಪಿಯುಸಿ ನಂತರ 5 ವರ್ಷಗಳ ಕೋರ್ಸುಗಳ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು 15 ವರ್ಷಕ್ಕೆ ಕಡಿಮೆಯಿಲ್ಲದಂತೆ ಸೇವೆ ಸಲ್ಲಿಸಿರುವ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು, ವೃತ್ತಿಪರ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ತರಬೇತಿ ಅವಧಿಯು 2 ವರ್ಷಗಳಾಗಿದ್ದು, ಮಾಸಿಕ ರೂ.10 ಸಾವಿರ ಶಿಷ್ಯವೇತನ ನೀಡಲಾಗುವುದು. ಅರ್ಜಿಯನ್ನು ಆನ್ಲೈನ್ ಮೂಲಕ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಜೂ.18 ರಿಂದ ಜು.31 ರವರೆಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, 08272-200500. ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ತಿಳಿಸಿದ್ದಾರೆ.