ಪ್ರತಿನಿಧಿ ವರದಿ ಮಡಿಕೇರಿ
ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಪ್ಪ, ವಿರಾಜಪೇಟೆಯ ಸರ್ವೋದಯ ಬಿ.ಇಡಿ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ವಾಣಿ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ, ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಎನ್.ಪಿ.ಕಾವೇರಿ ಆಯ್ಕೆಯಾಗಿದ್ದಾರೆ.
ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿಗಳು ಇವರನ್ನು ನಾಮನಿರ್ದೇಶನ ಮಾಡಿದ್ದರು.