ಪ್ರತಿನಿಧಿ ವರದಿ ಕೊಳ್ಳೇಗಾಲ
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಪಟ್ಟಣದ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಮಂಗಳವಾರ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರ ಕೊಳ್ಳೇಗಾಲದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಮತಯಾಚನೆ ಮಾಡಿದರು.
ಪಟ್ಟಣದ ವಾಸವಿ ವಿದ್ಯಾಸಂಸ್ಥೆ, ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆ, ಎಸ್.ವಿ.ಕೆ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು, ಸಂತ ಫ್ರಾನಿಸ್ಸ್ ವಿದ್ಯಾಸಂಸ್ಥೆ, ಆರ್.ಸಿ.ಎಂ ಶಾಲೆ, ಮಾನಸ ಶಿಕ್ಷಣ ಸಂಸ್ಥೆ, ಜೆಎಸ್ಎಸ್ ಮಹಿಳಾ ಕಾಲೇಜು, ಲಯನ್ಸ್ ವಿದ್ಯಾಸಂಸ್ಥೆ, ಎಂಜಿಎಸ್ವಿ ಸರ್ಕಾರಿ ಜೂನಿಯರ್ ಕಾಲೇಜು, ಶ್ರೀ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು, ವರ್ಮ ಐಟಿಐ ಕಾಲೇಜು, ಶ್ರೀ ಮಹದೇಶ್ವರ ಐಟಿಐ ಕಾಲೇಜುಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿಯ ಕರಪತ್ರವನ್ನು ವಿತರಿಸಿ ಶಿಕ್ಷಕರಲ್ಲಿ ಮತ ಕೇಳಿದರು.
ವಾಸವಿ ವಿದ್ಯಾ ಸಂಸ್ಥೆಯಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, 5ನೇ ಬಾರಿಗೆ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮರಿತಿಬ್ಬೆಗೌಡ ತಮಗೆಲ್ಲ ತಿಳಿದಂತೆ ಸರಳ, ಸಜ್ಜನ ಹಾಗೂ ಪ್ರಬುದ್ಧ ವ್ಯಕ್ತಿತ್ವ ಉಳ್ಳವರು ಎಂದು ಹೇಳಿದರು. ವಿಧಾನ ಪರಿಷತ್ ಸದನದಲ್ಲಿ ಪದವೀಧರರು ಹಾಗೂ ಶಿಕ್ಷಕರ ಪರವಾಗಿ ಮರಿತಿಬ್ಬೆಗೌಡ ಅವರು ಧ್ವನಿ ಎತ್ತಿದ್ದಾರೆ. ಅಂತೆಯೇ, ಹಿಂದಿನಿದಲೂ ಕಾಂಗ್ರೆಸ್ ಸರ್ಕಾರ ಶಿಕ್ಷಕರ ಬೇಡಿಕೆಗೆ ಪೂರಕವಾಗಿ ಹಿಂದಿನಿಂದಲೂ ಸ್ಪಂದಿಸಿದೆ. ಮುಂದೆಯೂ ನಿಮ್ಮ ಕೆಲಸ ಕಾರ್ಯಗಳನ್ನು ಕಾಂಗ್ರೆಸ್ ಸರ್ಕಾರ ಮಾಡಲಿದ್ದು, ಎಲ್ಲಾ ಶಿಕ್ಷಕರು ಮರಿತಿಬ್ಬೇಗೌಡ ಅವರಿಗೆ ನಿಮ್ಮ ಮೊದಲ ಪ್ರಾಶಸ್ತ್ಯದ ಮತವನ್ನು ನೀಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ಮಾತನಾಡಿ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎಲ್ಲ ಶಿಕ್ಷಕರು ಪಾಲ್ಗೊಂಡು ಮತ ಚಲಾಯಿಸಬೇಕು. ಶಿಕ್ಷಕರ ಪರವಾಗಿ ನಿಲ್ಲಲು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರನ್ನು ಕೈ ಹಿಡಿಯಬೇಕು ಎಂದು ಕೋರಿದರು.
ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಬಿ.ಚಂದ್ರು, ನಗರಸಭಾ ಸದಸ್ಯರಾದ ಶಂಕರನಾರಾಯಣ ಗುಪ್ತ, ಎಸ್.ಮಂಜುನಾಥ್, ಆರ್ಯ ವೈಶ್ಯ ಸಂಘದ ಅಧ್ಯಕ್ಷ ಎ.ಡಿ.ಕುಮಾರಕೃಷ್ಣ, ಕಾರ್ಯದರ್ಶಿ ಡಾ.ಪಿ.ಜಿ.ಶ್ರೀಧರ್ ಸೇರಿದಂತೆ ಇತರರು ಇದ್ದರು.
29ಕೆಜಿಎಲ್-2
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣದ ಶ್ರೀ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಮಂಗಳವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ದಕ್ಷಿಣ ಶಿಕ್ಷಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರವಾಗಿ ಮತಯಾಚಿಸಿದರು
Leave a comment