ಮಡಿಕೇರಿ: ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯು ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂ.27 ರಿಂದ ಜು.2 ರವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ವಿಡಿಯೊ ಸಂವಾದ ದಲ್ಲಿ ಸೇನಾ ನೇಮಕಾತಿ ರ್ಯಾಲಿಯನ್ನು ಸುಗಮವಾಗಿ ನಡೆಸಲು ಎಲ್ಲ ಹಂತದ ಅಧಿಕಾರಿಗಳು ಶ್ರಮಿಸುವಂತೆ ಸೂಚಿಸಿದರು. ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಮಣಂ ಇದ್ದರು.