ಕರವೇ ತಾಲೂಕು ಘಟಕದ ಅಧ್ಯಕ್ಷ ಅಯಾಜ್ ಕನ್ನಡಿಗ ಹೇಳಿಕೆ
ಪ್ರತಿನಿಧಿ ವರದಿ ಕೊಳ್ಳೇಗಾಲ
ಪಟ್ಟಣದ ಬಸ್ ಟರ್ಮಿನಲ್ ಬಳಿ ಬುಧವಾರ ಮಧ್ಯಾಹ್ನ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ)ಯ ತಾಲೂಕು ಘಟಕದ ಅಧ್ಯಕ್ಷ ಅಯಾಜ್ ಕನ್ನಡಿಗ ಅವರ 30ನೇ ವರ್ಷದ ಹುಟ್ಟುಹಬ್ಬವನ್ನು ನೂರಾರು ಜನರಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ತಾಲೂಕು ಪದಾಧಿಕಾರಿಗಳು ಅರ್ಥ ಪೂರ್ಣವಾಗಿ ಆಚರಿಸಿದರು.
ಕರವೇ ಗೌರವಾಧ್ಯಕ್ಷ ಕೃಷ್ಣನಾಯಕ, ಜಿಲ್ಲಾಧ್ಯಕ್ಷ ಆರ್.ಮೋಹನ್, ಉಪಾಧ್ಯಕ್ಷ ವೆಂಕಟೇಶ್, ನಾಗೇಶ್ ನಾಯಕ, ಪ್ರಧಾನ ಕಾರ್ಯದರ್ಶಿ ರಿಯಾಜ್ ಪಾಷ ಅವರ ಸಮ್ಮುಖದಲ್ಲಿ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಅಭಿಮಾನಿಗಳು 200ಕ್ಕೂ ಹೆಚ್ಚು ಜನರಿಗೆ ಅನ್ನ ಸಂತರ್ಪಣೆ ಮಾಡಿದರು.
ನಂತರ ಮಾತನಾಡಿದ ಅವರು, ಕಿರಿಯ ವಯಸ್ಸಿನಲ್ಲಿ ನನ್ನ ಹುಟ್ಟುಹಬ್ಬವನ್ನು ನೂರಾರು ಜನರ ಮಧ್ಯೆ ಅರ್ಥಪೂರ್ಣವಾಗಿ ಆಚರಿಸಿದ ವೇದಿಕೆಯ ಪದಾಧಿಕಾರಿಗಳು ಹಾಗೂ ಅಭಿಮಾನಿಗಳಿಗೆ ನಾನೆಂದು ಚಿರರೃಣಿ ಎಂದರು.
ಕರವೇ ಸಂಘಟನೆ ಸೇರಿದ ಎರಡೂವರೆ ವರ್ಷದ ಅವದಿಯಲ್ಲಿ ಹಾಗೂ ತಾಲೂಕು ಘಟಕದ ಅಧ್ಯಕ್ಷರಾಗಿ ನೇಮಕಗೊಂಡ 6 ತಿಂಗಳಲ್ಲಿ ಸಾಕಷ್ಟು ಜನಪರ ಹೋರಾಟಗಳನ್ನು ಮಾಡಿದ ತೃಪ್ತಿ ಇದೆ ಹಾಗೂ ನನ್ನ ಹುಟ್ಟುಹಬ್ಬಕ್ಕೊಂದು ಅರ್ಥ ಬರುವಂತೆ ನಡೆಸಲು ಅವಕಾಶ ದೊರೆತಿರುವ ಹಿನ್ನೆಲೆ ಮುಂದಿನ ದಿನದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಜನರನ್ನು ಸಂಘಟಿಸಿ, ಹತ್ತು ಹಲವು ಸಾರ್ವಜನಿಕ ಸಮಸ್ಯೆ ಪರಿಹರಿಸಲು ಶ್ರಮಿಸುತ್ತೇನೆ. ನನ್ನ ಉಸಿರಿರುವತನಕ ಕನ್ನಡ ನಾಡು, ನುಡಿ ಮತ್ತು ಕಾವೇರಿ ರಕ್ಷಣೆಗೆ ಮುಂದಾಗುತ್ತೇನೆ ಭರವಸೆ ನೀಡಿದರು.
25ಕೆಜಿಎಲ್-5
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣದ ಬಸ್ ಟರ್ಮಿನಲ್ ಬಳಿ ಬುಧವಾರ ಕರವೇ ತಾಲೂಕು ಘಟಕದ ಅಧ್ಯಕ್ಷ ಅಯಾಜ್ ಕನ್ನಡಿಗ ಅವರಿಗೆ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾಧ್ಯಕ್ಷ ಆರ್.ಮೋಹನ್ ಅವರು ಶುಭಕೋರಿದರು.
.