ಬೆಂಗಳೂರು : ಮೈಸೂರು ಮಹಾರಾಜರಿಗೆ ಟಿಕೆಟ್ ಕೊಡುತ್ತಾರೆ ಅಂತ ನನಗೆ ಗೊತ್ತಿಲ್ಲ. ನಾನಂತೂ ಅವರನ್ನು ಸಂಪರ್ಕ ಮಾಡಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾಧ್ಯಕ್ಷರು ಹೇಳಿದ್ದಾರೆ. ಪ್ರತಾಪ್ ಸಿಂಹ ಕೂಡ ಅದೇ ಮಾತು ಹೇಳಿದ್ದಾರೆ. ತಾಳ್ಮೆಯಿಂದ ಕಾಯುವುದು ಒಳ್ಳೆಯದು. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕೊನೆಯವರೆಗೂ ಕಾಯುವುದು ಒಳ್ಳೆಯದು ಎಂದು ಸಲಹೆ ನೀಡಿದರು.