- ಶಾಸಕ ಡಾ.ಮಂತರ್ ಗೌಡ ಚಾಲನೆ
ಪ್ರತಿನಿಧಿ ವರದಿ ಮಡಿಕೇರಿ
ಮಡಿಕೇರಿ- ಚೆನ್ನರಾಯಪಟ್ಟಣ ಮಾರ್ಗದ ಅಶ್ವಮೇಧ ಬಸ್ಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು.
ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು, ಮಡಿಕೇರಿ-ಸೋಮವಾರಪೇಟೆ, ಅರಕಲಗೋಡು, ಚೆನ್ನರಾಯಪಟ್ಟಣ ಮಾರ್ಗ ಪ್ರತಿದಿನ ಬೆಳಗ್ಗೆ 10.15 ಗಂಟೆಗೆ ಹೊರಟು ಸಂಜೆ 4.45 ಗಂಟೆಗೆ ಬೆಂಗಳೂರು ತಲುಪಲಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರಿಗೆ ತೆರಳಲು ಸಾರ್ವಜನಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದರು. ಮಡಿಕೇರಿ ಕೆಎಸ್ಆರ್ಟಿಸಿ ಘಟಕದ ವ್ಯವಸ್ಥಾಪಕ ವೀರಭದ್ರಸ್ವಾಮಿ ಇದ್ದರು.
ಫೋಟೋ 14 ಎಂಡಿಕೆ 03 ; ಮಡಿಕೇರಿ- ಚೆನ್ನರಾಯಪಟ್ಟಣ ಮಾರ್ಗದ ಅಶ್ವಮೇಧ ಬಸ್ಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು.