ಪ್ರತಿನಿಧಿ ವರದಿ ಕೊಳ್ಳೇಗಾಲ
ತಾಲೂಕಿನ ಧನಗೆರೆ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ಆಟೋ ಹಾಗೂ ಕಬ್ಬಿನ ಮಿನಿಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಆಟೋ ಚಾಲಕ ಮೃತಪಟ್ಟಿದನೆ ಮತ್ತು ಇಬ್ಬರು ಗಾಯಾಗೊಂಡಿರು ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಆಲಹಳ್ಳಿ ಗ್ರಾಮದ ನಿವಾಸಿ ಮುತ್ತು ಚೇತನ್(18) ಮೃತ ಆಟೋ ಚಾಲಕ. ಇದೇ ಗ್ರಾಮದ ನಿವಾಸಿ ಪ್ರೀತಮ್ ಹಾಗೂ ಹೊಸಹಳ್ಳಿ ನಿವಾಸಿ ಅಜಯ್ ಕುಮಾರ್ ಗಾಯಾಗೊಂಡಿದರೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಪೂಜೆ ಮುಗಿಸಿಕೊಂಡು ಆಟೋದಲ್ಲಿ ಈ ಮೂವರು ಮಂಡ್ಯಕ್ಕೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಬ್ಬಿನ ಲಾರಿ ದಿಢೀರ್ ಡಿಕ್ಕಿ ಹೊಡೆದಿದೆ. ಕಬ್ಬಿನ ಲಾರಿ ನಂಜನಗೂಡಿನ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ತೆರಳುತ್ತಿತ್ತು ಎನ್ನಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳಿಗೆ ಪಟ್ಟಣದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.
16ಕೆಜಿಎಲ್-4
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ತಾಲೂಕಿನ ಧನಗೆ ರೆ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ಮುಖಾಮುಖಿ ಡಿಕ್ಕಿಯಾದ ಕಬ್ಬು ತುಂಬಿದ ಮಿನಿ ಲಾರಿ ಹಾಗೂ ಪ್ಯಾಸೆಂಜರ್ ಆಟೋ ಫೋಟೋ ಮತ್ತು ಗಾಯಾಳುಗಳ ಫೋಟೋ ಇದೆ.