ಸೋಮವಾರಪೇಟೆ: ಪೊಲೀಸ್ ಇಲಾಖೆ ವತಿಯಿಂದ ವಾಹನ ಸವಾರರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಕಾರ್ಯಾಗಾರ ಸೋಮವಾರ ಠಾಣಾ ಆವರಣದಲ್ಲಿ ನಡೆಯಿತು.
ಪಟ್ಟಣದಲ್ಲಿ ವಾಹನ ಸವಾರರು ನಿಯಮಗಳನ್ನು ಉಲ್ಲಂಘಿಸುವ ಮೂಲಕ ವಾಹನ ಚಲಾಯಿಸುತ್ತಿದ್ದ ಸವಾರರನ್ನು ಠಾಣೆಗೆ ಸೇರಿಸಿ, ಅವರಿಗೆ ಸಂಚಾರಿ ನಿಯಮಗಳ ಬಗ್ಗೆ ಠಾಣಾಧಿಕಾರಿ ರಮೇಶ್ಕುಮಾರ್ ಮಾರ್ಗದರ್ಶನ ನೀಡಿದರು. ವಾಹನ ಸವಾರರು ಮತ್ತು ಪಾದಚಾರಿಗಳು ಸೇರಿದಂತೆ ಅವಗಡಗಳು ಸಂಭವಿಸದ ಹಾಗೆ ಸುರಕ್ಷತೆ ಹಾಗು ಕಟ್ಟುನಿಟ್ಟಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಸವಾರರಿಗೆ ತಿಳಿ ಹೇಳಿದರು.
ವಾಹನ ಸವಾರರು ದುರ್ಘಟನೆಗಳು ಸಂಭವಿಸಿದ ನಂತರ ಪಶ್ಚಾತಾಪ ಪಡುವ ಬದಲು ಪ್ರತಿನಿತ್ಯ ಸುರಕ್ಷಿತ ವಿಧಾನಗಳನ್ನು ಅನುಸರಿಸಿ, ತಮ್ಮ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಹೇಳಿದರು.
ನಿಯಮ ಪಾಲಿಸದ ಬೈಕ್, ಸ್ಕೂಟರ್, ಆಟೋ ಚಾಲಕರಿಂದ ದಂಡ ವಸೂಲಾತಿ ಮಾಡಲಾಯಿತು.
ಚಿತ್ರ :-ಸೋಮವಾರಪೇಟೆ ಪಟ್ಟಣದಲ್ಲಿ ವಾಹನ ಸವಾರರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಠಾಣಾಧಿಕಾರಿ ರಮೇಶ್ ಕುಮಾರ್ ಮಾಹಿತಿ ನೀಡಿದರು.
—————–