ಶಾಸಕ ಎಂ.ಆರ್.ಮಂಜುನಾಥ್ ಅಭಿಪ್ರಾಯ
ಪ್ರತಿನಿಧಿ ವರದಿ ಹನೂರು
ಸಾಕಷ್ಟು ಹಣ ಇದ್ದರು ಸಹ ದಾನ ಮಾಡಲು ಮನಸು ಬೇಕು ಆ ನಿಟ್ಟಿನಲ್ಲಿ ದಾನಗಳ ರೂಪದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಸರ್ಕಾರದ ಜತೆಗೆ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಮುಂದಾಗಿರೋದು ಒಳ್ಳೆಯ ಬೆಳವಣಿಗೆ ಎಂದು ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು.
ತಾಲೂಕಿನ ಬಸಪ್ಪನದೊಡ್ಡಿ ಶಾಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ವಾರದಲ್ಲಿ ಆರು ದಿನವೂ ಸಹ ಪೂರಕ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.
ಮಕ್ಕಳು ಕಲಿಕೆಯ ಜತೆಗೆ ಅವರಿಗೆ ಬೇಕಾದ ಪೌಷ್ಟಿಕ ಆಹಾರ ಒದಗಿಸಬೇಕು. ಆ ನಿಟ್ಟಿನಲ್ಲಿ ಫೌಂಡೇಶನ್ ಮುಂದೆ ಬಂದಿರುವುದು ತುಂಬಾ ಒಳ್ಳೆಯ ಬೆಳವಣಿಗೆ. ಬಸಪ್ಪನದೊಡ್ಡಿ ಶಾಲಾವರಣ ಈಗಾಗಲೇ ತುಂಬಾ ಚೆನ್ನಾಗಿ ಇದೆ. ಅದಾಗಿಯೂ ಸಹ ಇರುವ ಕೊರತೆಗಳ ಬಗ್ಗೆ ಗಮನಹರಿಸುತ್ತೇನೆ. ಈ ಶಾಲೆಯಲ್ಲಿ ಈಗಾಗಲೇ ಕಂಪ್ಯೂಟರ್ ಕಲಿಕೆಗೆ ಒತ್ತು ನೀಡಲಾಗಿದೆ. ಅದರಂತೆ ನಾನು ಸಹ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಶ್ರಮ ಹಾಕುತ್ತೇನೆ. ಈಗಾಗಲೇ ಯೋಜನೆ ಸಹ ರೂಪಿಸಿಕೊಂಡಿದ್ದೇನೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಮಾತನಾಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ, ತಾಪಂ ಇಒ ಉಮೇಶ್, ಸೂಳೇರಿ ಪಾಳ್ಯ ಗ್ರಾಪಂ ಅಧ್ಯಕ್ಷ ಮುತ್ತುರಾಜು, ಸದಸ್ಯ ರಾಜು, ಇಸಿಒ ಅಶೋಕ್, ಮುಖ್ಯ ಶಿಕ್ಷಕ ವೀರಪ್ಪ, ಸಿಆರ್ಸಿ ಚಂದ್ರು ಶೇಖರ್ ಸೇರಿದಂತೆ ಗ್ರಾಪಂ ಪಿಡಿಒ ಮಾದೇಶ್, ಇನ್ನಿತರರು ಉಪಸ್ಥಿತರಿದ್ದರು.
ಚಿತ್ರ: ಹನೂರು ತಾಲೂಕಿನ ಬಸಪ್ಪನದೊಡ್ಡಿ ಶಾಲೆಯಲ್ಲಿ ಶಾಸಕ ಮಂಜುನಾಥ್ ಮಕ್ಕಳ ಜತೆಗೂಡಿ ಬಿಸಿಯೂಟ ಸೇವನೆ ಮಾಡುತ್ತಿರುವುದು.