ಪ್ರತಿನಿಧಿ ವರದಿ ಚಾಮರಾಜನಗರ
ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಮ್ ಅವರು ಎಲ್ಲ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಡಾ.ಬಾಬು ಜಗಜೀವನರಾಮ್ ಅವರ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ, ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿ, ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅರಕಲವಾಡಿ ನಾಗೇಂದ್ರ ಮಾತನಾಡಿ, ಯಾವುದೇ ಸೌಲಭ್ಯಗಳು ಇಲ್ಲದ ಸಂದರ್ಭದಲ್ಲಿ ಶ್ರಮಪಟ್ಟು ಓದಿದರು. ದೊರೆತ ಅವಕಾಶ ಪಡೆದು ಸಾಧನೆ ಮಾಡುವ ಮೂಲಕ ದೇಶ, ಸಮಾಜಕ್ಕೆ ತಮ್ಮದೆಯಾದ ಕೊಡುಗೆಯನ್ನು ನೀಡಿದ್ದಾರೆ. ಅಂತಹ ಮಹಾನ್ ನಾಯಕನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ ಮಾತನಾಡಿ, ಡಾ.ಬಾಬು ಜಗಜೀವನರಾಂ ಅವರು ರಕ್ಷಣಾ ಸಚಿವರಾಗಿದ್ದಂತಹ ಸಂದರ್ಭದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಜನರ ಕಲ್ಯಾಣ ಬಯಸಿದ ಮಹಾಚೇತನರಾಗಿದ್ದರು ಎಂದರು.
ಚೂಡಾ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡಳ್ಳಿ ಮೂರ್ತಿ, ಕಾರ್ಯದರ್ಶಿ ಸಿ.ಚನ್ನಬಸವಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ಅರಕಲವಾಡಿ ಮಹದೇವಯ್ಯ, ಮುಖಂಡರಾದ ವೇಣುಗೋಪಾಲ, ಹೇಮಂತ್, ರಾಜು, ಮುಖಂಡರಾದ ಶಿವಕುಮಾರ್, ಲಿಂಗರಾಜು ಇದ್ದರು.
5ಸಿಎಚ್ಎನ್.3:ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಾಬು ಜಗಜೀವನರಾಮ್ ಅವರ 117 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.