ಮೈಸೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹಿನ್ನಲೆ, ಮೈಸೂರಿನಲ್ಲಿ ಬೇಕರಿ ಸುಟ್ಟು ಭಸ್ಮವಾಗಿರುವ ಘಟನೆ ಜರುಗಿದೆ. ನಗರದ ಹೂಟಗಳ್ಳಿಯ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ಬೇಕರಿ & ಸ್ವೀಟ್ಸ್ ಅಂಗಡಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿಗಾಹುತಿಯಾಗಿದೆ.
ಕಳೆದ ರಾತ್ರಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಬೇಕರಿ ಸುಟ್ಟು ಸಂಪೂರ್ಣ ಭಸ್ಮವಾಗಿದೆ. ಕೀರ್ತಿ ಎನ್ನುವವರಿಗೆ ಸೇರಿದ ಬೇಕರಿ ಇದಾಗಿದ್ದು, ಸುಮಾರು 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಬೇಕರಿ ತಿನಿಸು ಹಾಗೂ ಪೀಠೋಪಕರಣಗಳು ಬೆಂಕಿಯ ಕಿನ್ನಾಲಿಗೆ ಭಸ್ಮವಾಗಿದೆ. ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.