ಪ್ರತಿನಿಧಿ ವರದಿ ಗುಂಡ್ಲುಪೇಟೆ
ತಾಲೂಕಿನ ಬಂಡೀಪುರ ಸಫಾರಿ ಕೇಂದ್ರದ ಮೇಲುಕಾಮನ ಹಳ್ಳಿ ರಸ್ತೆಯ ಬಳಿ ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ,ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ತಾಲೂಕಿನ ಬಂಡೀಪುರ ಅರಣ್ಯ ಇಲಾಖೆಯಲ್ಲಿ ಚಾಲಕ ಕೆಲಸೂರು ಗ್ರಾಮದ ಅನಂದ (36) ಎಂಬುವರೇ ಮೃತಪಟ್ಟವರಾಗಿದ್ದು, ಗಿರಿಜನ ಹಾಡಿಯ ನವೀನ್ ಹಾಗೂ ಕುಮಾರ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿ ಚಾಮರಾಜನಗರದ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ವಿವರ : ತಾಲೂಕಿನ ಬಂಡೀಪುರ ಅರಣ್ಯ ಇಲಾಖೆ ಯಲ್ಲಿ ಚಾಲಕನಾಗಿ ಕರ್ತವ್ಯ ಮಾಡುತ್ತಿದ್ದ ಅನಂದ ಎಂಬುವರು ತಮ್ಮ ಕರ್ತವ್ಯ ಮುಗಿಸಿ ಸಂಜೆ 7.3೦ ರ ಸಮಯದಲ್ಲಿ ಬಂಡೀಪುರದಿಂದ ಗುಂಡ್ಲುಪೇಟೆ ಕಡೆಗೆ ಟಿ.ವಿ.ಎಸ್ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಎದುರುಗಡೆಯಿಂದ ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ಯುವಕರ ಬೈಕ್ ಡಿಕ್ಕಿ ಹೊಡೆದು ಘಟನೆ ನಡೆದಿದೆ ಎನ್ನಲಾಗಿದೆ. ಪಟ್ಟಣ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲು ಮಾಡಲಾಗಿದ್ದು , ಮೃತನ ಮರಣೋತ್ತರ ಪರೀಕ್ಷೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿ ಮೃತದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಲಾಯಿತು.