ತಮಿಳುನಾಡಿಗೆ ಕೂಡಲೇ ಕಾವೇರಿ ನೀರು ಬಿಡುವುದನ್ನು ಹಿಂಪಡೆಯಲಿ. ಇಲ್ಲದಿದ್ದರೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ಮಾಡಲಿದೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ ಕೊಟ್ಟಿದ್ದಾರೆ. ರಾಜ್ಯವನ್ನು ಆಳುವ ನೈತಿಕತೆ ಸರ್ಕಾರಕ್ಕೆ ಇಲ್ಲ. ಕಾವೇರಿ ಹೋರಾಟವನ್ನು ಯಾರೇ ಮಾಡಿದರೂ ಅದಕ್ಕೆ ಬಿಜೆಪಿ ಬೆಂಬಲ ಕೊಡುತ್ತದೆ. ತಮಿಳುನಾಡಿಗೆ ಸರ್ಕಾರ ಈಗಾಗಲೇ ದೊಡ್ಡ ಲಾಭ ಮಾಡಿಕೊಟ್ಟಿದೆ. ಹೇಡಿ ನಿರ್ಧಾರ ವಾಪಸ್ ಪಡೆಯುವಂತೆ ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.