PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: 14 ಸಾವಿರಕ್ಕೆ ಹೆಣ್ಣು ಮಗು ಮಾರಾಟ..! ಪ್ರಕರಣ ದಾಖಲಿಸದ ಪೊಲೀಸರಿಂದ ಮಧ್ಯವರ್ತಿಗಳಂತೆ ವರ್ತನೆ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > 14 ಸಾವಿರಕ್ಕೆ ಹೆಣ್ಣು ಮಗು ಮಾರಾಟ..! ಪ್ರಕರಣ ದಾಖಲಿಸದ ಪೊಲೀಸರಿಂದ ಮಧ್ಯವರ್ತಿಗಳಂತೆ ವರ್ತನೆ..!
ಜಿಲ್ಲೆನಂಜನಗೂಡುಮುಖಪುಟಮೈಸೂರು ಗ್ರಾಮಾಂತರ

14 ಸಾವಿರಕ್ಕೆ ಹೆಣ್ಣು ಮಗು ಮಾರಾಟ..! ಪ್ರಕರಣ ದಾಖಲಿಸದ ಪೊಲೀಸರಿಂದ ಮಧ್ಯವರ್ತಿಗಳಂತೆ ವರ್ತನೆ..!

Prathinidhi News
Last updated: March 20, 2025 3:59 pm
Prathinidhi News
Published March 20, 2025
Share
SHARE

ಮೈಸೂರು , ಮಾರ್ಚ್‌ 20, 2025 :ಬಡತನದಲ್ಲಿ ಬೆಂದ ಕುಟುಂಬವೊಂದು ಕೇವಲ 14 ಸಾವಿರಕ್ಕೆ ಹೆಣ್ಣು ಮಗು ಮಾರಾಟ ಮಾಡಿರುವ  ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ಜರುಗಿದೆ. 

ನಂಜನಗೂಡಿನ ಅನಿಲ್ ಕುಮಾರ್ ಹಾಗೂ ಸೌಮ್ಯ ದಂಪತಿಗೆ ಮೂರು ಮಕ್ಕಳು. ದಂಪತಿಗೆ ಹುಟ್ಟಿದ ಮೂರು ಮಕ್ಕಳೂ ಹೆಣ್ಣಾದ ಕಾರಣ, ಮಗುವಿನ ಅವಶ್ಯಕತೆಯಿದ್ದ ಗುಂಡ್ಲುಪೇಟೆ ನಿವಾಸಿಯೊಬ್ಬರಿಗೆ ಮೂರನೇ ಮಗು ಅಮೂಲ್ಯಳನ್ನು ಮಾರಾಟ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ ಪ್ರಕರಣ ಬೆಳಕಿಗೆ ಬಂದ ನಂತರ ನಂಜನಗೂಡು ಪೊಲೀಸರು ಹಾಗೂ ಶಿಶು ಅಭಿವೃದ್ದಿ ಯೋಜನೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಮಾರಾಟವಾದ ಮಗುವನ್ನು ವಶಕ್ಕೆ ಪಡೆದಿದ್ದು, ಯಾರ ವಿರುದ್ಧವೂ ಪ್ರಕರಣ ದಾಖಲು ಮಾಡದೇ ಕೇವಲ ಮಧ್ಯವರ್ತಿಗಳಂತೆ ವರ್ತಿಸಿ ಆರೋಪಿಗಳನ್ನು ವಾಪಸ್ ಕಳುಹಿಸಿದ್ದಾರೆ ಎಂಬ ಆರೋಪ ಕೂಡ ಕೇಳಿ ಬಂದಿದೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

- ಜಾಹೀರಾತು -

ಮಗು ಮಾರಾಟ ಆಗಿದೆ ಎಂಬ ಮಾಹಿತಿ ತಿಳಿದವರು ಅಂಗನವಾಡಿ ಕಾರ್ಯಕರ್ತೆ ಲಾವಣ್ಯ ಎಂಬುವರಿಗೆ ದೂರು ನೀಡಿದ್ದಾರೆ. ಕೂಡಲೇ ಲಾವಣ್ಯರವರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಿ,  ನಂತರ ಸ್ಥಳೀಯ ಮುಖಂಡರಾದ ಅನಂತ್ ರವರಿಗೆ ಅಧಿಕಾರಿಗಳು‌‌ ಮಾಹಿತಿ ತಿಳಿಸಿದ್ದಾರೆ.  ನಂತರ ಅನಂತ್ ಮಗುವನ್ನ ಖರೀದಿಸಿದವರನ್ನು ಸಂಪರ್ಕಿಸಿದಾಗ 14 ಸಾವಿರಕ್ಕೆ ಮಗು ಮಾರಾಟ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಅಲ್ಲದೆ ಮಗು ಖರೀದಿ ಮಾಡಿರುವ ಗುಂಡ್ಲುಪೇಟೆ ಮೂಲದವರು ನಮಗೆ ನಮ್ಮ ಹಣ ಕೊಟ್ಟರೆ ಮಗು ಕೊಡುವುದಾಗಿ ತಿಳಿಸಿದ್ದಾರೆ.

ಮೊದಲು ಮಗುವನ್ನು ತಂದು ಕೊಡಿ ನಂತರ ಹಣದ ವಿಚಾರ ಮಾತನಾಡೋಣ ಎಂದು ತಿಳಿಸಿದ ಅನಂತ್ ಮಾತಿಗೆ ಒಪ್ಪಿದ ಗುಂಡ್ಲುಪೇಟೆ ಪೋಷಕರು ಮಗುವನ್ನು ವಾಪಸ್ ತಂದು ಕೊಟ್ಟಿದ್ದಾರೆ.  ಮಗು ವಾಪಸ್ ಬಂದ ನಂತರ ನಂಜನಗೂಡು ಪೊಲೀಸರು ಪ್ರಕರಣದ ನಡುವೆ ಎಂಟ್ರಿ ನೀಡಿದ್ದು, ಶಿಶು ಅಭಿವೃದ್ದಿ ಯೋಜನೆ ಅಧಿಕಾರಿಗಳು ಸೇರಿದಂತೆ ಮಾರಾಟವಾದ ಮಗುವನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಯಾರ ವಿರುದ್ಧವೂ ಪ್ರಕರಣ ದಾಖಲು ಮಾಡದ ಪೊಲೀಸರು,  ಮಗುವನ್ನು ಮೈಸೂರಿನಲ್ಲಿರುವ ಶಿಶುಪಾಲನಾ ಕಚೇರಿ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಮಗುವನ್ನು ಮಾರಾಟ ಮಾಡಿದವರನ್ನಾಗಲಿ, ಮಧ್ಯವರ್ತಿಯನ್ನಾಗಲಿ ಅಥವಾ ಖರೀದಿಸದವರನ್ನಾಗಲಿ ವಶಕ್ಕೆ ಪಡೆಯದ ಪೊಲೀಸರು, ಕೇವಲ ಮಧ್ಯವರ್ತಿಗಳಂತೆ ವರ್ತಿಸಿ ಆರೋಪಿಗಳನ್ನು ಪೊಲೀಸರು ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮುಖಪುಟಸಮಗ್ರ

‘ಭಾರತ ಹಿಂದೂ ರಾಷ್ಟ್ರವಾಗಬೇಕು, ಆ ನಿಟ್ಟಲ್ಲೇ ಕೆಲಸ ಮಾಡುತ್ತೇವೆ’; ಕಂಗನಾ

May 13, 2024
ಜಿಲ್ಲೆ

ಕಲುಷಿತ ನೀರು‌ ಸೇವಿಸಿ ಆರು ಮಂದಿ ಸಾವು ಹಿನ್ನೆಲೆ, ಕಾವಾಡಿಗರಹಟ್ಟಿಗೆ ಹೈಟೆಕ್ ಸ್ಪರ್ಶ ನೀಡಲು ಮುಂದಾದ ಸರ್ಕಾರ

January 18, 2024
ಬೆಂಗಳೂರುಮುಖಪುಟಮೈಸೂರು ನಗರರಾಜಕೀಯ

ಜುಲೈ 19ಕ್ಕೆ ಸಿಎಂ ತವರಲ್ಲಿ “ಸರ್ಕಾರದ ಸಾಧನಾ ಸಮಾವೇಶ”..! ಇದು ಸಿಎಂ ʼಶಕ್ತಿ ಪ್ರದರ್ಶನʼ ಸಮಾವೇಶ..?

July 15, 2025
ಮುಖಪುಟ

ಶೃಂಗೇರಿ ಶಾರದಾ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

May 26, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?