ಬೆಳಗಾವಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಧಾರವಾಡ ಮತ್ತು ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಬೆಳಗಾವಿ ಲೋಕಸಭೆ ಟಿಕೆಟ್ ನೀಡದಂತೆ ಬೆಳಗಾವಿ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದಂತೆ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು, ಕೆಲ ಮುಖಂಡರ ಪಟ್ಟು ಹಿಡಿದಿದ್ದಾರೆ. ಇಷ್ಟೇ ಅಲ್ಲದೆ ಟಿಕೆಟ್ ನೀಡುವುದನ್ನು ವಿರೋಧಿಸಿ ದೆಹಲಿಗೆ ಹೋಗಲು ಮುಖಂಡರ ಪ್ಲ್ಯಾನ್ ಮಾಡಿದ್ದಾರೆ.
ಈ ವಿಚಾರವಾಗಿ ಪ್ರಭಾಕರ್ ಕೋರೆ ಮನೆಯಲ್ಲಿ ಶಾಸಕ ಅಭಯ್ ಪಾಟೀಲ್, ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಮಹಾಂತೇಶ ಕವಟಗಿಮಠ, ಎಂ.ಬಿ.ಜಿರಲೆ ಸಭೆ ಸೇರಿದ್ದರು. ಸಭೆಯಲ್ಲಿ ರಾಜ್ಯಸಭಾ ಸದಸ್ಯ ಕಡಾಡಿ ನೇತೃತ್ವದಲ್ಲಿ ದೆಹಲಿಗೆ ಹೋಗಲು ಪ್ಲ್ಯಾನ್ ಮಾಡಿದ್ದಾರೆ. ಇನ್ನೇರಡು ದಿನಗಳಲ್ಲಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ ಇದೆ.