ಗುಂಡ್ಲುಪೇಟೆ: ಶಾಲಾ ಬಸ್ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಸವಾರ ಮೃತಪಟ್ಟಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಬೆಂಡಗಹಳ್ಳಿ-ಮಾಡ್ರಹಳ್ಳಿ ಮಧ್ಯೆದಲ್ಲಿ ನಡೆದಿದೆ.
ಬನ್ನೀತಾಳಪುರ ಗ್ರಾಮದ ಜವರಶೆಟ್ಟಿ(52) ಮೃತ ವ್ಯಕ್ತಿ. ಈತ ಗುಂಡ್ಲುಪೇಟೆ ಕಡೆಯಿಂದ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕೂಡಲೇ ಆತನನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ನಂತರ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಶಾಲಾ ವಾಹನ ಹಾಗೂ ಬೈಕ್ ವಶಕ್ಕೆ ಪಡೆದ ಗುಂಡ್ಲುಪೇಟೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.