ಗುಂಡ್ಲುಪೇಟೆ : ತೆರಕಣಾಂಬಿ ಗ್ರಾಮದ ಬಿಜೆಪಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ನೇತೃತ್ವದಲ್ಲಿ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಜತೆಗೂಡಿ ಸಭೆ ನಡೆಸಲಾಯಿತು.
ಸಭೆಯ ನೇತೃತ್ವ ವಹಿಸಿ ಮಾತನಾಡಿದ ಸಿ. ಎಸ್.ನಿರಂಜನ್ ಕುಮಾರ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜತೆಗೂಡಿ ಸಭೆ ನಡೆಸಿ ಚುನಾವಣೆಯ ಬಗ್ಗೆ ಪ್ರತಿ ಗ್ರಾಮಕ್ಕೂ ಅಭ್ಯರ್ಥಿಯು ಭೇಟಿ ನೀಡಲು ಸಮಯವಕಾಶ ಇಲ್ಲ. ಆದ್ದರಿಂದ ಮತದಾನಕ್ಕೆ ಇನ್ನು ಕೆಲವೇ ದಿನ ಇರುವ ಹಿನ್ನೆಲೆ ಗ್ರಾಮದ ಕಾರ್ಯಕರ್ತರೇ ಅಭ್ಯರ್ಥಿಯಾಗಿ ತಮ್ಮ ಬೂತುಗಳಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಅವರ ಪರ ಮತಯಾಚನೆ ಮಾಡುವ ಮೂಲಕ ತಮ್ಮ ತಮ್ಮ ಬೂತ್ ಗಳಲ್ಲಿ ಅಧಿಕ ಪ್ರಮಾಣದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾವಣೆ ಆಗಲು ಮತ್ತು ಪ್ರಧಾನಿ ನರೇಂದ್ರ ಮೋದಿ ರವರ ಕೈ ಬಲಪಡಿಸಲು ಪ್ರತಿಯೊಬ್ಬ ಮುಖಂಡರು ಕಾರ್ಯಕರ್ತರು ಶಕ್ತಿ ಮೀರಿ ಶ್ರಮಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಮಾಜಿ ಪುರಸಭಾ ಅಧ್ಯಕ್ಷರಾದ ಎಲ್ ಸುರೇಶ್. ಶಾನಡ್ರಳ್ಳಿ ಮಲ್ಲಿಕಾರ್ಜುನಪ್ಪ ಕನ್ನೆಗಾಲ ಮಾದಪ್ಪ. ತಾಲೂಕು ಪ್ರಧಾನ ಕಾರ್ಯದರ್ಶಿ ಸುನಿಲ್ ಮುಖಂಡರಾದ ನವೀನ್ ಮೌರ್ಯ , ಎಸ್ ಸಿ ಮೋರ್ಚಾ ಅಧ್ಯಕ್ಷ ನಾಗುಸ್ವಾಮಿ, ಪಕ್ಷದ ಇತರ ಮುಖಂಡರು, ಪದಾಧಿಕಾರಿಗಳು ಕಾರ್ಯಕರ್ತರುಗಳು ಭಾಗಿಯಾಗಿದ್ದರು.
ಫೋಟೋ ಇದೆ