ಬೆಂಗಳೂರು: ಪಂಚ ರಾಜ್ಯಗಳಿಗೆ ರಾಜ್ಯದಿಂದ ಹಣ ರವಾನೆ ಆರೋಪಿಸಿ ಪ್ರತಿಭಟನೆ ಇಂದು ಬೆಳಿಗ್ಗೆ 11ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಪ್ರತಿಭಟನೆ ಮಾಡಲಿದೆ. ಪ್ರಕರಣವನ್ನ ಸಿಬಿಐಗೆ ವಹಿಸಿ ಮತ್ತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರಾಜಿನಾಮೆ ನೀಡಬೇಕೆಂದು ಆಗ್ರಹಿಸಲಿದೆ. ಪ್ರತಿಭಟನೆಯಲ್ಲಿ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಮಾಜಿ ಸಚಿವ ಆರ್.ಅಶೋಕ್, ಸಿ.ಎನ್ ಅಶ್ವತ್ಥ್ ನಾರಾಯಣ್, ಶಾಸಕ ಕೆ.ಗೋಪಾಲಯ್ಯ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬೆಂಗಳೂರಿನ ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಮಾಜಿ ಮೇಯರ್, ಬಿಬಿಎಂಪಿ ಮಾಜಿ ಸದಸ್ಯರುಗಳು ಭಾಗಿಯಾಗಲಿದ್ದಾರೆ.