ಚಿಕ್ಕೋಡಿ: ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ‘ಲೋಡ್ಶೆಡ್ಡಿಂಗ್’ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಇಂದು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ವಿವಿಧೆಡೆ ಬಿಜೆಪಿ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಕುಡಚಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಪಿ.ರಾಜೀವ್ ನೇತೃತ್ವದಲ್ಲಿ ರಾಯಬಾಗ ತಾಲೂಕಿನ ಕೆಇಬಿಯ 110ಕೆವಿ ಉಪಕೇಂದ್ರಗಳಿಗೆ ಮತ್ತು ಯಲ್ಪಾರಟ್ಟಿ, ಹಿಡಕಲ್ನಲ್ಲಿರುವ 110ಕೆವಿ ವಿದ್ಯುತ್ ಉಪಕೇಂದ್ರಗಳಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.