ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಚಿನ್ನದಂತಹ ಅವಕಾಶವಿದೆ. ತಾವು ಸತ್ಯಹರಿಶ್ಚಂದ್ರ ಅಂತ ಸಾಬೀತು ಮಾಡುವ ಅವಕಾಶ ಇದೆ. ನೀವು ತಪ್ಪು ಮಾಡಿಲ್ಲ ಅನ್ನೋದನ್ನು ತನಿಖೆ ಎದುರಿಸಿ ತೋರಿಸಿ. ಸಚಿವ ಸಂಪುಟ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಯಾವ ರೀತಿ ಹೋರಾಟ ಮಾಡಬೇಕೆಂದು ಚರ್ಚೆ ನಡೆಸಿ ನಿರ್ಧಾರ. ನಮ್ಮ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ ರಾಜಕೀಯ ಪ್ರೇರಿತವಲ್ಲ. ಪ್ರಾಥಮಿಕ ತನಿಖೆ ಮಾಹಿತಿ ಆಧರಿಸಿ ಸಿಬಿಐ ತನಿಖೆಗೆ ಕೊಡಲಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.