ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತೆ ಪಿ.ಜಿ.ಆರ್.ಸಿಂಧ್ಯಾ ಮಾಹಿತಿ
ಪ್ರತಿನಿಧಿ ವರದಿ ಚಿಕ್ಕಮಗಳೂರು
ನಗರದ ಬಿಜಿಎಸ್ ಶಾಲಾ ಆವರಣದಲ್ಲಿ ಬರುವ ಅಕ್ಟೋಬರ್ ತಿಂಗಳಿನಲ್ಲಿ ರಾಜ್ಯಮಟ್ಟದ ಕಬ್ಸ್ ಮತ್ತು ಬುಲ್ ಬುಲ್ ಉತ್ಸವ ನಡೆಯಲಿದೆ ಎಂದು ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ತಿಳಿಸಿದ್ದಾರೆ.
ಬಿಜಿಎಸ್ ಶಾಲೆಗೆ ಶನಿವಾರ ಭೇಟಿ ನೀಡಿದ ಬಳಿಕ ಮಾತನಾಡಿದ ಆವರು, ಒಟ್ಟು 4 ದಿನಗಳು ಈ ಉತ್ಸವ ಅಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಶಾಲಾ ಮಕ್ಕಳು ಆಗಮಿಸಲಿದ್ದಾರೆ. ಸ್ಕೌಟ್ಸ್, ಗೈಡ್ಸ್ ಸಂಬಂದಪಟ್ಟಂತೆ ಎಲ್ಲ ರೀತಿಯ ವಿವಿಧ ಚಟುವಟಿಕೆಗಳು, ಸ್ಪರ್ಧೆಗಳು ಈ ಉತ್ಸವದಲ್ಲಿ ನಡೆಯಲ್ಲಿದ್ದು, ಅನೇಕ ಶಿಕ್ಷಣ ಸಂಸ್ಥೆಗಳು, ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ ಎಂದರು.
ಪರಮ ಪೂಜ್ಯ ಬಾಲಗಂಗಾಧರನಾಥ ಸ್ವಾಮೀಜಿ ಇಡೀ ರಾಜ್ಯದಲ್ಲಿ ತಮ್ಮ ಶಿಕ್ಷಣ ಸಂಸ್ಥೆಗಳ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ವ್ಯವಸ್ಥೆ ಮಾಡಿದ್ದಾರೆ. ಈಗ ನಿರ್ಮಲಾನಂದ ಶ್ರೀಗಳು ಈ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುತಿರುವುದು ಸಮಾಜದಲ್ಲಿ ಶಿಕ್ಷಣ ಕ್ರಾಂತಿಯನ್ನೇ ಮಾಡಿದೆ ಎಂದರು.
ಭಾರತ್ ಸ್ಕೌಟ್ಸ್, ಗೈಡ್ಸ್ ರಾಜ್ಯ ಉಪಾಧ್ಯಕ್ಷ ಎ.ಎನ್.ಮಹೇಶ್, ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್.ಷಡಾಕ್ಷರಿ, ಜಿಲ್ಲಾ ಸಂಘಟ ಕಿರಣ್ ಕುಮಾರ್, ಬಿಜಿಎಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಸುಂದ್ರೇಶ್, ಮುಖ್ಯೋಪದ್ಯಾಯ ಚಂದ್ರಶೇಖರ್ ಸೇರಿ ಹಲವರು ಹಾಜರಿದ್ದರು.