ಮೈಸೂರು, ಮಾ.10: ಕರ್ನಾಟಕದ ರಸ್ತೆಗಳ ಚಿತ್ರಣ 2024 ರ ಹೊತ್ತಿಗೆ ಚಿತ್ರಣ ಬದಲಾಗಲಿದ್ದು, ರಸ್ತೆಗಳಿಗೆ ಸಮನಾಗಿ ಇರಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು. ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ 22 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೈಸೂರು, ಹಾಸನಕ್ಕೆ ರಿಂಗ್ ರಸ್ತೆ ಮಾಡಿಸುತ್ತೇನೆ. ಕುಶಾಲನಗರ- ಮಾಣಿ ರಸ್ತೆಗೆ ಡಿಪಿಆರ್ ಮಾಡಿಸುತ್ತೇವೆ ಎಂದರು.
ಮೈಸೂರು- ನಂಜನಗೂಡು 6 ಪಥದ ರಸ್ತೆ ಕಾಮಗಾರಿ ಶೀರ್ಘದಲ್ಲೇ ಆರಂಭಗೊಳ್ಳಲಿದೆ. ಕರ್ನಾಟಕ ಸಮೃದ್ಧ ರಾಜ್ಯವಾಗಿದೆ. ಸಾಹಿತ್ಯ, ಕಲೆ, ಸಂಗೀತ ಎಲ್ಲದರಲ್ಲೂ ವಿಶೇಷತೆ ಇದೆ. ಕರ್ನಾಟಕದ ವಿಕಾಸಕ್ಕಾಗಿ ಗ್ರೀನ್ ಎಕ್ಸ್ಪ್ರೆಸ್ ನಿರ್ಮಾಣ ಮಾಡಲಾಗುವುದು. ಬೆಂಗಳೂರು-ಚೆನ್ನೈ ನಡುವೆ 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗಲಿದೆ. ಕೇವಲ 2 ಗಂಟೆಯಲ್ಲಿ ಬೆಂಗಳೂರಿನಿಂದ ಚೆನ್ನೈ ತಲುಪಬಹುದು ಎಂದರು. ಬೆಂಗಳೂರಿನ ರಿಂಗ್ ರಸ್ತೆ ಮುಖ್ಯ. 280 ಕಿ.ಮೀ. ರಿಂಗ್ ರಸ್ತೆ ಡಿಸೆಂಬರ್ನಲ್ಲಿ ಪೂರ್ಣವಾಗಲಿದೆ. ಇದರಿಂದ ಬೆಂಗಳೂರು ಟ್ರಾಫಿಕ್ ಜಾಮ್ ಮುಕ್ತವಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮೈಸೂರು ಭಾಗದಲ್ಲಿನ ಅಭಿವೃದ್ಧಿಗೆ ಅಭಿನಂದಿಸುತ್ತೀರಿ. ಇದರ ನಿಜವಾದ ಕ್ರೆಡಿಟ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕ್ರೆಡಿಟ್ ಸಲ್ಲುತ್ತದೆ. ದೇಶಾದ್ಯಂತ ಸಾವಿರಾರು ಕಿ.ಮೀ. ರಸ್ತೆ ಮಾಡಿದ್ದಾರೆ. ದಶಪಥ ಹೆದ್ದಾರಿಗೆ ಹಣ ಕೊಟ್ಟಿದ್ದು ನಿತಿನ್ ಗಡ್ಕರಿ ಎಂದರು. ಅಲ್ಲದೆ, ವಿವಿಧ ಯೋಜನೆಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿದರು.