ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಇಂದು ಮೈಸೂರಿನಲ್ಲಿ ಪ್ರೊ.ಭಗವಾನ್ ಮನೆಗೆ ಮುತ್ತಿಗೆಗೆ ಕರೆ ನೀಡಿದ್ದಾರೆ. ಮೈಸೂರು ಚಾಮರಾಜ ಒಕ್ಕಲಿಗರ ಸಂಘದಿಂದ ಮೈಸೂರಿನ ಕುವೆಂಪು ನಗರದಲ್ಲಿರುವ ಪ್ರೊ.ಭಗವಾನ್ ಮನೆ ಮುತ್ತಿಗೆಗೆ ಕರೆ ನೀಡಲಾಗಿದೆ. ‘ಒಕ್ಕಲಿಗರು ಸಂಸ್ಕೃತಿ ಹೀನರು ಅಂತಾ ಕುವೆಂಪು ಹೇಳಿದ್ದರು’ ‘ಅದನ್ನು ನಾನು ಹೇಳಿದರೆ ಹೊಡೆಯುತ್ತಾರೆ’ ಎಂದು ನಿನ್ನೆ ಮಹಿಷ ಉತ್ಸವದಲ್ಲಿ ಪ್ರೊ.ಭಗವಾನ್ ಹೇಳಿಕೆ ನೀಡಿದ್ದರು.