ಪ್ರತಿನಿಧಿ ವರದಿ ಬೆಟ್ಟದಪುರ
ಬೆಟ್ಟದಪುರದಲ್ಲಿ ಜು.4ರಂದು ಕೆಂಪೇಗೌಡ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯನ್ನು ಎಪಿಎಂಸಿ ಆವರಣದಲ್ಲಿ ಶನಿವಾರ ನಡೆಸಲಾಯಿತು.
ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣಗೌಡ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಜಯಂತಿಯು ಕರ್ನಾಟಕದ ಒಂದು ಪ್ರಮುಖ ಹಬ್ಬವಾಗಿದೆ. ಪ್ರತಿ ವರ್ಷ ಸರ್ಕಾರ ಮಟ್ಟದಿಂದಲೂ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಕೆಂಪೇಗೌಡರ 515ನೇ ಜಯಂತಿಯನ್ನು ಬೆಟ್ಟದಪುರ ಹೋಬಳಿಯ ಕೇಂದ್ರ ಸ್ಥಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದ್ದು, ಅಂದಿನ ದಿನ ಕೆಂಪೇಗೌಡರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಬಳಿಕ ಬೆಟ್ಟದಪುರದ ಪ್ರಮುಖ ಬೀದಿಗಳಲ್ಲಿ ಬೆಳ್ಳಿ ರಥದಲ್ಲಿ ಕೆಂಪೇಗೌಡರ ಭಾವಚಿತ್ರವನ್ನು ಪ್ರತಿಷ್ಠಾಪಿಸಿ, ಮೆರವಣಿಗೆ ಮಾಡಲಾಗುವುದು. ನಂತರ ಕೆಂಪೇಗೌಡರ ಜೀವನ ಮತ್ತು ಸಾಧನೆಗಳನ್ನು ಸ್ಮರಿಸುವ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಬಿ.ಜೆ ದೇವರಾಜು ಮಾತನಾಡಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದ ಯಶಸ್ವಿಗೆ ಎಲ್ಲರ ಸಹಕಾರ ಅತ್ಯಮೂಲ್ಯವಾಗಿದೆ ಎಂದರು.
ನಿವೃತ್ತ ಶಿಕ್ಷಕ ಆರ್.ವೆಂಕಟೇಶ್, ನಾಗಣ್ಣ, ರಾಮಸ್ವಾಮಿ, ಮುಖಂಡರಾದ ಚಂದ್ರೇಗೌಡ, ರವಿ, ಗಿರಿಗೌಡ, ದೀಪು, ಉದಯ್, ನಟರಾಜ, ಚಂದ್ರಣ್ಣ, ಗಗನ್, ಪ್ರವೀಣ್, ಶಾಮ್, ಹರೀಶ, ರಘುರಾಯ, ಸಂದೀಪ್, ಶರತ್, ನಂದೀಶ್, ಮಂಜು, ಪ್ರತಾಪ್, ದೇವರಾಜ್ ಇದ್ದರು.
29ಬಿಟಿಪಿ01: ಬೆಟ್ಟದಪುರದ ಎಪಿಎಂಸಿ ಆವರಣದಲ್ಲಿ ಶನಿವಾರ ನಿವೃತ್ತ ದೈಹಿಕ ಶಿಕ್ಷಕ ನಾರಾಯಣ ಗೌಡ ನೇತ್ರತ್ವದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.