ಮಂಡ್ಯ : ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರ ಜತೆ ಮಂಡ್ಯ ಸಂಸದೆ ಸುಮಲತಾ ಮಾತನಾಡಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಸುಮಲತಾ ಜತೆ ಕಾಂಗ್ರೆಸ್ ನಾಯಕರು ಮಾತನಾಡಿದ್ದಾರೆ ಎನ್ನಲಾದ ವರದಿಗಳ ಕುರಿತು ಮಂಡ್ಯದಲ್ಲಿ ಪ್ರತಿಕ್ರಿಯಿಸಿದ ಅವರು, ಸಂಸದೆ ಸುಮಲತಾ ಯಾರ ಜೊತೆ ಮಾತನಾಡಿದ್ದಾರೆ ನನಗೆ ಗೊತ್ತಿಲ್ಲ. ಬಿಜೆಪಿ ಜತೆಗಿದದ್ದೇನೆ, ಆ ಪಕ್ಷಕ್ಕೇ ಬೆಂಬಲ ಎಂದು ಸುಮಲತಾ ಘೋಷಣೆ ಮಾಡಿಕೊಂಡಿದ್ದಾರೆ. ಸಂಸದೆ ಸುಮಲತಾ ಬಗ್ಗೆ ನಾನು ಯಾವತ್ತೂ ಲಘುವಾಗಿ ಮಾತನಾಡಿಲ್ಲ. ಬಿಜೆಪಿ ಟಿಕೆಟ್ ಕೇಳಿರುವ ಸುಮಲತಾ ಬಗ್ಗೆ ಮಾತನಾಡಿದರೆ ಏನು ಅರ್ಥವಿದೆ. ನಮ್ಮಲ್ಲೇ ಉತ್ತಮ ಅಭ್ಯರ್ಥಿ ಇದ್ದಾರೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.