ಪ್ರತಿನಿಧಿ ವರದಿ ತಲಕಾಡು
ತಲಕಾಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ವತಿಯಿಂದ 2023 – 24 ನೇ ಸಾಲಿನ ಮೈಸೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಬಿನಿ ವಲಯದ ಪುರುಷರ ಚೆಸ್ ಮತ್ತು ಟೇಬಲ್ ಟೆನಿಸ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ತಿ.ನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ವಿ.ಉದಯ್ ಕುಮಾರ್ ಮಾತನಾಡಿ, ಕ್ರೀಡೆಯಿಂದ ವಿದ್ಯಾರ್ಥಿಗಳ ಆರೋಗ್ಯಕರ ಬದುಕು ನಿರ್ಮಾಣವಾಗುತ್ತದೆ ಎಂದರು. ಮಹಿಳಾ ವಾಣಿಜ್ಯ ಹಾಗೂ ನಿರ್ವಹಣಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಟಿ. ಉದಯ್ ಕುಮಾರ್ ವಿದ್ಯಾರ್ಥಿಗಳಿಗೆ ಕ್ರೀಡೆಗಳ ಮಹತ್ವ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಎನ್. ವಸಂತರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಚೆಸ್ ಕ್ರೀಡೆಯಲ್ಲಿ ಏಳು ತಂಡಗಳು, ಟೇಬಲ್ ಟೆನಿಸ್ ಕ್ರೀಡೆಯಲ್ಲಿ ಮೂರು ತಂಡಗಳು ಭಾಗವಹಿಸಿದ್ದರು. ಪಂದ್ಯಾವಳಿ ತೀರ್ಪುಗಾರರಾಗಿ, ಅಂತಾರಾಷ್ಟ್ರೀಯ ಚೆಸ್ ಆಟಗಾರ ವೈ.ಜಿ.ವಿಜಯೇಂದ್ರ ಮತ್ತು ಹುಲ್ಲಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ.ಸಂಧ್ಯಾ ರಾಣಿ ಕಾರ್ಯನಿರ್ವಹಿಸಿದರು.
ಪಂದ್ಯಾವಳಿಯಲ್ಲಿ ಕಬಿನಿ ವಲಯದ ಸಂಚಾಲಕರು, ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಸ್. ಮಂಜು, ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಮಹೇಶ್, ಕಾಲೇಜಿನ ಬೋಧಕರು, ಬೋಧಕೇತರರು, ವಿದ್ಯಾರ್ಥಿಗಳು ಮತ್ತು ಕಬಿನಿ ವಲಯದ ಕಾಲೇಜಿನ ಸ್ಪರ್ಧಾರ್ಳಗಳು ಭಾಗವಹಿಸಿದ್ದರು.
ಚಿತ್ರಶೀರ್ಷಿಕೆ 1,2