ಚಿಕ್ಕಮಗಳೂರು: 2023-24 ನೇ ಸಾಲಿನಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಇವರು ಪ್ರಾಯೋಜಕತ್ವದಲ್ಲಿ ಜಿಲ್ಲೆಯಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಮಾ.5 ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ.
ಆಸಕ್ತ ಮಕ್ಕಳಿಗೆ 6 ರಿಂದ 12 ವರ್ಷ ಹಾಗೂ 12 ರಿಂದ 18 ವರ್ಷದ ಮಕ್ಕಳಿಗೆ ವೈಯಕ್ತಿಕ ಸ್ಪರ್ಧೆಗಳಾದ ಚಿತ್ರಕಲೆ, ಕವನ/ಪದ್ಯ ವಾಚನ ಮತ್ತು ಜಾನಪದ ಗೀತೆ ಹಾಗೂ ಗುಂಪು ಸ್ಪರ್ಧೆಗೆ 6 ರಿಂದ 12 ವರ್ಷದ ಒಂದು ತಂಡ ಹಾಗೂ 12 ರಿಂದ 18 ವರ್ಷದ ಎರಡು ಕಲಾ ತಂಡಗಳು ಜಾನಪದ ನೃತ್ಯ, ಜಾನಪದ ಗೀತೆ ಮತ್ತು ಜಾನಪದ ಕ್ರೀಡೆ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯನ್ನು (08262-235793) ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಾಕ್ಷೇಪಣಾ ಪತ್ರ ಕಡ್ಡಾಯ
ಚಿಕ್ಕಮಗಳೂರು: ಜಿಲ್ಲಾ ಅಂತರ್ಜಲ ಸಮಿತಿಯ ಸೂಚನೆಯಂತೆ ಕಡೂರು ತಾಲ್ಲೂಕಿನಲ್ಲಿರುವ ಕೊಳವೆ ಬಾವಿಗಳ ನೋಂದಣಿ, ಹೊಸ ಕೊಳವೆ ಬಾವಿ ಕೊರೆಯಲು ಅನುಮತಿ ಪಡೆಯುವುದು, ಕೊಳವೆ ಬಾವಿ ಕೊರೆಯುವ ರಿಗ್ ಯಂತ್ರಗಳ ನೋಂದಣಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ಅಂತರ್ಜಲವನ್ನು ಬಳಸುತ್ತಿರುವವರು ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ.
ಕೊಳವೆ ಬಾವಿಯನ್ನು ನೋಂದಾಯಿಸಿಕೊಳ್ಳಲು ವೆಬ್ಸೈಟ್ hಣಣಠಿs://ತಿತಿತಿ.ಞgತಿಚಿ.iಟಿ/ಠಿubಟiಛಿ/ ಅಥವಾ hಣಣಠಿs://ಚಿಟಿಣhಚಿಡಿರಿಚಿಟಚಿ.ಞಚಿಡಿಟಿಚಿಣಚಿಞಚಿ.gov.iಟಿ/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಛೇರಿಯನ್ನು (ದೂ.ಸಂ. 08262-295758) ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂತರ್ಜಲ ಪ್ರಾಧಿಕಾರ ಸಮಿತಿ ಅಧ್ಯಕ್ಷರ ಹಾಗೂ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.